ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವ ಜಯಂತಿ ಅಂಗವಾಗಿ ಮಂಗಳವಾರ ಬೆಳಿಗ್ಗೆ 6ರಿಂದ 8ರವರಗೆ ಬಸವೇಶ್ವರಸ್ವಾಮಿಗೆ ರುದ್ರಾಭಿಷೇಕ, ಗಣಪತಿ, ಆಂಜನೇಯ, ನವಗ್ರಹಗಳಿಗೆ ಹೋಮ ನಡೆಯಲಿದೆ. ರಾತ್ರಿ 8ಕ್ಕೆ ಹೂವಿನ ಪಲ್ಲಕ್ಕಿ ಉತ್ಸವ, ಸಿಡಿಮದ್ದು ಪ್ರದರ್ಶನ ಏರ್ಪಡಿಸಲಾಗಿದೆ. ರಾತ್ರಿ 9ಕ್ಕೆ ‘ಸುಂದರಕಾಂಡ ರಾಮಾಯಣ’ ಪೌರಾಣಿಕ ನಾಟಕ ನಡೆಯಲಿದೆ ಎಂದರು.