ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಎ.ಪಿ. ಮಲ್ಲಿಕಾರ್ಜುನಗೌಡ ಮಾತನಾಡಿ, ‘ವಿಶ್ವ ಆಹಾರ ದಿನಾಚರಣೆಯು ಸಂಧಿಗ್ಧ ಪರಿಸ್ಥಿತಿಯಲ್ಲಿ ಆಹಾರ ಭದ್ರತೆ ಸಾಧನೆಗೈಯ್ಯುವುದು ಹಾಗೂ ಪ್ರಪಂಚದಲ್ಲಿ ಹಸಿವು, ಬಡತನದಿಂದ ನರಳುತ್ತಿರುವ ಜನರ ಸ್ಥಿತಿಗತಿ, ಅವ್ಯವಸ್ಥೆಗಳತ್ತ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವಾಗಿದೆ. ಹೆಚ್ಚುತ್ತಿರುವ ಜನಸಂಖ್ಯೆಗೆ ಉತ್ತಮ ಗುಣಮಟ್ಟದ ಪೋಷಕಾಂಶಯುಕ್ತ ಆಹಾರ ಒದಗಿಸುವ ನಿಟ್ಟಿನಲ್ಲಿ ಭೂಮಿಯ ಆರೋಗ್ಯ ಕಾಪಾಡುವುದು ಅತಿ ಅವಶ್ಯ’ ಎಂದರು.