₹40 ಲಕ್ಷ ವೆಚ್ಚದಲ್ಲಿ ನಿರ್ಮಾಣ ಕಾರ್ಯ ಸಾಗುತ್ತಿತ್ತು. ಮುಜರಾಯಿ ಇಲಾಖೆಗೆ ಸೇರಿರುವ ಈ ದೇವಾಲಯ ಚೋಳರ ಕಾಲದ್ದು. ಹಳೆ ಗೋಪುರ ಕೆಡವಿ ಹೊಸ ಗೋಪುರ ನಿರ್ಮಾಣ ನಡೆದಿತ್ತು. ಸುಮಾರು 2 ವರ್ಷದಿಂದ ದೇವಾಲಯದ ಕಾಮಗಾರಿ ನಡೆಯುತ್ತಿತ್ತು. ಆದರೆ, ಗುತ್ತಿಗೆ ಪಡೆದಿದ್ದ ತಮಿಳುನಾಡು ಮೂಲದ ವ್ಯಕ್ತಿ ಮಾಡಿರುವ ಕಳಪೆ ಕಾಮಗಾರಿಯಿಂದ ಈ ದುರಂತ ನಡೆದಿದೆ ಎಂದು ಗ್ರಾಮಸ್ಥರ ಆರೋಪವಾಗಿದೆ.