ಹಳೆ ಕೆನರಾ ಬ್ಯಾಂಕ್ ರಸ್ತೆ, ವೆಂಕಟರಮಣ ದೇವಾಲಯದ ರಸ್ತೆ, ನಾಡಕಚೇರಿ ರಸ್ತೆಗಳಲ್ಲಿ ವಾಹನಗಳನ್ನು ರಸ್ತೆಗೆ ಅಡ್ಡವಾಗಿ ನಿಲ್ಲಿಸಲಾಗುತ್ತಿದೆ. ಬೀದಿ ಬದಿ ವ್ಯಾಪಾರಿಗಳು ಸಹಾ ರಸ್ತೆಯನ್ನು ಅಕ್ರಮಿಸಿ ವ್ಯಾಪಾರ ವಹಿವಾಟು ಮಾಡಿಕೊಳ್ಳುತ್ತಿದ್ದಾರೆ. ಇಲ್ಲಿ ಬಂದು ವ್ಯಾಪಾರ ಮಾಡುವ ಗ್ರಾಹಕರು ರಸ್ತೆಯಲ್ಲೆ ನಿಂತು ವ್ಯಾಪಾರ ಮಾಡುತ್ತಾರೆ. ಇದರಿಂದ ರಸ್ತೆಯಲ್ಲಿ ದಟ್ಟಣೆ ಹೆಚ್ಚಾಗಿ ಸಾರ್ವಜನಿಕರಿಗೂ ಕಿರಿಕಿರಿಯಾಗುತ್ತಿದೆ.