‘ಇಲ್ಲಿನ ಹಳೇ ಕೆನರಾ ಬ್ಯಾಂಕ್ ರಸ್ತೆ, ಹಳೇ ಪುರಸಭಾ ಕಾರ್ಯಾಲಯದ ರಸ್ತೆ, ವೆಂಕಟರಮಣಸ್ವಾಮಿ ದೇವಾಲಯದ ರಸ್ತೆಯೂ ಸೇರಿದಂತೆ ಬಹುತೇಕ ರಸ್ತೆಗಳಲ್ಲಿ ವಾಹನಗಳಲ್ಲಿ ಎಲ್ಲೆಂದರಲ್ಲಿ ನಿಲ್ಲಿಸುತ್ತಿದ್ದಾರೆ. ಬಸ್ ನಿಲ್ದಾಣದ ಸಮೀಪದ ರಸ್ತೆಗಳಲ್ಲೂ ಕಾರುಗಳನ್ನು ನಡು ರಸ್ತೆಗಳಲ್ಲಿ ನಿಲ್ಲಿಸಿ ಹೋಗುತ್ತಾರೆ. ಗಂಟೆಗಟ್ಟಲೇ ತೆಗೆಯುವುದಿಲ್ಲ. ಇದರಿಂದ ನಾವು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ’ ಎಂದರು.