<p><strong>ದೇವನಹಳ್ಳಿ:</strong> ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ–44ರಲ್ಲಿ ಸೋಮವಾರ ಬೆಳಗ್ಗೆಯೇ ಸಾರಿಗೆ ಇಲಾಖೆಯ ಅಧಿಕಾರಿಗಳು ಬಸ್ಗಳ ತಪಾಸಣೆ ನಡೆಸಿದರು. ಈ ವೇಳೆ ನಿಯಮ ಮೀರಿ ಸಂಚರಿಸಿದ್ದ ಅಂತರರಾಜ್ಯ ಬಸ್ಗಳಿಂದ ಒಟ್ಟು ₹16,700 ದಂಡ ವಸೂಲಿ ಮಾಡಲಾಗಿದೆ.</p>.<p>ದೇವನಹಳ್ಳಿ ಎಆರ್ಟಿಒ ಸುಧೀರ್ ಅವರ ನೇತೃತ್ವದಲ್ಲಿ ರಾಣಿಕ್ರಾಸ್ ಬಳಿ ಕಾರ್ಯಾಚರಣೆ ನಡೆಯಿತು. ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಸ್ಲೀಪರ್ ಕೋಚ್ ಸೇರಿದಂತೆ ಹಲವು ಬಸ್ಗಳನ್ನು ತಡೆದು ಪರಿಶೀಲನೆ ಮಾಡಲಾಯಿತು.</p>.<p>ಬೆಳಗ್ಗೆಯೇ ಬಸ್ಗಳನ್ನು ತಡೆದ ಕಾರಣ ಕೆಲ ಪ್ರಯಾಣಿಕರಿಗೆ ತೊಂದರೆ ಆದರೂ, ಅವರನ್ನು ಬೆಂಗಳೂರಿಗೆ ಕಳುಹಿಸಲು ಬೇರೆ ಬಸ್ಗಳ ವ್ಯವಸ್ಥೆ ಮಾಡಲಾಯಿತು.</p>.<p>ಬಸ್ಗಳಲ್ಲಿ ಹೆಚ್ಚುವರಿ ಲಗೇಜ್ ಸಾಗಣೆ, ಟ್ಯಾಕ್ಸ್ ಪಾವತಿ, ಅಂತರರಾಜ್ಯ ನೋಂದಣಿ ದಾಖಲೆಗಳು ಹಾಗೂ ಚಾಲಕರ ಲೈಸೆನ್ಸ್ ಪರಿಶೀಲಿಸಲಾಯಿತು. ತೆರಿಗೆ ಪಾವತಿಸದೆ ಓಡಿಸುತ್ತಿದ್ದ ಹಾಗೂ ನಿಯಮ ಉಲ್ಲಂಘಿಸಿದ್ದ ಬಸ್ಗಳಿಗೆ ದಂಡ ಹಾಕಲಾಗಿದ್ದು, ಕೆಲ ಗಂಭೀರ ಪ್ರಕರಣಗಳಲ್ಲಿ ಬಸ್ಗಳನ್ನು ಜಪ್ತಿ ಕೂಡ ಮಾಡಲಾಯಿತು.</p>.<p>ರಸ್ತೆ ಸುರಕ್ಷತೆ ಕಾಪಾಡುವ ಉದ್ದೇಶದಿಂದ ಇಂತಹ ತಪಾಸಣೆ ಮುಂದೆಯೂ ನಡೆಯಲಿದೆ ಎಂದು ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ–44ರಲ್ಲಿ ಸೋಮವಾರ ಬೆಳಗ್ಗೆಯೇ ಸಾರಿಗೆ ಇಲಾಖೆಯ ಅಧಿಕಾರಿಗಳು ಬಸ್ಗಳ ತಪಾಸಣೆ ನಡೆಸಿದರು. ಈ ವೇಳೆ ನಿಯಮ ಮೀರಿ ಸಂಚರಿಸಿದ್ದ ಅಂತರರಾಜ್ಯ ಬಸ್ಗಳಿಂದ ಒಟ್ಟು ₹16,700 ದಂಡ ವಸೂಲಿ ಮಾಡಲಾಗಿದೆ.</p>.<p>ದೇವನಹಳ್ಳಿ ಎಆರ್ಟಿಒ ಸುಧೀರ್ ಅವರ ನೇತೃತ್ವದಲ್ಲಿ ರಾಣಿಕ್ರಾಸ್ ಬಳಿ ಕಾರ್ಯಾಚರಣೆ ನಡೆಯಿತು. ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಸ್ಲೀಪರ್ ಕೋಚ್ ಸೇರಿದಂತೆ ಹಲವು ಬಸ್ಗಳನ್ನು ತಡೆದು ಪರಿಶೀಲನೆ ಮಾಡಲಾಯಿತು.</p>.<p>ಬೆಳಗ್ಗೆಯೇ ಬಸ್ಗಳನ್ನು ತಡೆದ ಕಾರಣ ಕೆಲ ಪ್ರಯಾಣಿಕರಿಗೆ ತೊಂದರೆ ಆದರೂ, ಅವರನ್ನು ಬೆಂಗಳೂರಿಗೆ ಕಳುಹಿಸಲು ಬೇರೆ ಬಸ್ಗಳ ವ್ಯವಸ್ಥೆ ಮಾಡಲಾಯಿತು.</p>.<p>ಬಸ್ಗಳಲ್ಲಿ ಹೆಚ್ಚುವರಿ ಲಗೇಜ್ ಸಾಗಣೆ, ಟ್ಯಾಕ್ಸ್ ಪಾವತಿ, ಅಂತರರಾಜ್ಯ ನೋಂದಣಿ ದಾಖಲೆಗಳು ಹಾಗೂ ಚಾಲಕರ ಲೈಸೆನ್ಸ್ ಪರಿಶೀಲಿಸಲಾಯಿತು. ತೆರಿಗೆ ಪಾವತಿಸದೆ ಓಡಿಸುತ್ತಿದ್ದ ಹಾಗೂ ನಿಯಮ ಉಲ್ಲಂಘಿಸಿದ್ದ ಬಸ್ಗಳಿಗೆ ದಂಡ ಹಾಕಲಾಗಿದ್ದು, ಕೆಲ ಗಂಭೀರ ಪ್ರಕರಣಗಳಲ್ಲಿ ಬಸ್ಗಳನ್ನು ಜಪ್ತಿ ಕೂಡ ಮಾಡಲಾಯಿತು.</p>.<p>ರಸ್ತೆ ಸುರಕ್ಷತೆ ಕಾಪಾಡುವ ಉದ್ದೇಶದಿಂದ ಇಂತಹ ತಪಾಸಣೆ ಮುಂದೆಯೂ ನಡೆಯಲಿದೆ ಎಂದು ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>