<p><strong>ವಿಜಯಪುರ (ದೇವನಹಳ್ಳಿ): </strong>ಬೈಕ್ನಲ್ಲಿ ಚಲಿಸುತ್ತಿದ್ದ ವೇಳೆ ಮರದ ಕೊಂಬೆ ಬಿದ್ದು ಮೃತಪಟ್ಟಿದ್ದ ಪಟ್ಟಣದ 17ನೇ ವಾರ್ಡ್ ಯುವಕ ವೆಂಕಟ ವರುಣ್ ಕುಟುಂಬಕ್ಕೆ ಪುರಸಭೆಯಿಂದ ಶುಕ್ರವಾರ ₹1ಲಕ್ಷ ಪರಿಹಾರದ ಚೆಕ್ ಅನ್ನು ಪುರಸಭೆ ಅಧ್ಯಕ್ಷೆ ಭವ್ಯ ಮಹೇಶ್ ವಿತರಿಸಿದರು.</p>.<p>ಮುರಳಿಕೃಷ್ಣ ಅವರ ಪುತ್ರ ವೆಂಕಟವರುಣ್ ಅವರು ಕಳೆದ ಮೇ 9ರಂದು ಪಟ್ಟಣದ ದೇವನಹಳ್ಳಿ ರಸ್ತೆ ಬಸ್ ನಿಲ್ದಾಣದ ಬಳಿ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದ ಕೊಂಬೆ ಬಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದ ಎಂದು ಪುರಸಭೆ ಅಧ್ಯಕ್ಷೆ ಭವ್ಯ ಮಹೇಶ್ ತಿಳಿಸಿದರು.</p>.<p>ಮೃತನ ಕುಟುಂಬದವರು ಆರ್ಥಿಕ ಪರಿಹಾರಕ್ಕಾಗಿ ಪುರಸಭೆಗೆ ಮನವಿ ಸಲ್ಲಿಸಿದ್ದರು. ಸಭೆಯಲ್ಲಿ ಈ ಕುರಿತು ಎಲ್ಲ ಸದಸ್ಯರು ಚರ್ಚಿಸಿ ಸರ್ವಾನುಮತದ ಒಪ್ಪಿಗೆಯಿಂದ ಆರ್ಥಿಕ ಸಹಾಯವಾಗಲೆಂದು ₹1ಲಕ್ಷ ಚೆಕ್ ಅನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.</p>.<p>ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ, ಉಪಾಧ್ಯಕ್ಷೆ ತಾಜುನ್ನೀಸಾಮಹಬೂಬ್ ಪಾಷಾ, ಸದಸ್ಯರಾದ ಬೈರೇಗೌಡ, ನಂದಕುಮಾರ್, ಮುಖಂಡ ಮಹೇಶ್, ಮೃತನ ಕುಟಂಬದ ಸದಸ್ಯರು, ಪುರಸಭೆ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ದೇವನಹಳ್ಳಿ): </strong>ಬೈಕ್ನಲ್ಲಿ ಚಲಿಸುತ್ತಿದ್ದ ವೇಳೆ ಮರದ ಕೊಂಬೆ ಬಿದ್ದು ಮೃತಪಟ್ಟಿದ್ದ ಪಟ್ಟಣದ 17ನೇ ವಾರ್ಡ್ ಯುವಕ ವೆಂಕಟ ವರುಣ್ ಕುಟುಂಬಕ್ಕೆ ಪುರಸಭೆಯಿಂದ ಶುಕ್ರವಾರ ₹1ಲಕ್ಷ ಪರಿಹಾರದ ಚೆಕ್ ಅನ್ನು ಪುರಸಭೆ ಅಧ್ಯಕ್ಷೆ ಭವ್ಯ ಮಹೇಶ್ ವಿತರಿಸಿದರು.</p>.<p>ಮುರಳಿಕೃಷ್ಣ ಅವರ ಪುತ್ರ ವೆಂಕಟವರುಣ್ ಅವರು ಕಳೆದ ಮೇ 9ರಂದು ಪಟ್ಟಣದ ದೇವನಹಳ್ಳಿ ರಸ್ತೆ ಬಸ್ ನಿಲ್ದಾಣದ ಬಳಿ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದ ಕೊಂಬೆ ಬಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದ ಎಂದು ಪುರಸಭೆ ಅಧ್ಯಕ್ಷೆ ಭವ್ಯ ಮಹೇಶ್ ತಿಳಿಸಿದರು.</p>.<p>ಮೃತನ ಕುಟುಂಬದವರು ಆರ್ಥಿಕ ಪರಿಹಾರಕ್ಕಾಗಿ ಪುರಸಭೆಗೆ ಮನವಿ ಸಲ್ಲಿಸಿದ್ದರು. ಸಭೆಯಲ್ಲಿ ಈ ಕುರಿತು ಎಲ್ಲ ಸದಸ್ಯರು ಚರ್ಚಿಸಿ ಸರ್ವಾನುಮತದ ಒಪ್ಪಿಗೆಯಿಂದ ಆರ್ಥಿಕ ಸಹಾಯವಾಗಲೆಂದು ₹1ಲಕ್ಷ ಚೆಕ್ ಅನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.</p>.<p>ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ, ಉಪಾಧ್ಯಕ್ಷೆ ತಾಜುನ್ನೀಸಾಮಹಬೂಬ್ ಪಾಷಾ, ಸದಸ್ಯರಾದ ಬೈರೇಗೌಡ, ನಂದಕುಮಾರ್, ಮುಖಂಡ ಮಹೇಶ್, ಮೃತನ ಕುಟಂಬದ ಸದಸ್ಯರು, ಪುರಸಭೆ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>