<p><strong>ವಿಜಯಪುರ: </strong>ಗ್ರಾಮಾಂತರ ಪ್ರದೇಶದ ಯುವಜನರು ಸ್ಥಳೀಯ ಸಮಸ್ಯೆಗಳ ಕುರಿತು ಜಾಗೃತರಾಗುವುದರ ಜತೆಗೆ ಅವುಗಳ ನಿವಾರಣೆಗಾಗಿ ಶ್ರಮಿಸುವುದು ಅಗತ್ಯ ಎಂದು ಬಸವ ಕಲ್ಯಾಣ ಮಠದ ಅಧ್ಯಕ್ಷ ಮಹದೇವಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಬಸವ ಕಲ್ಯಾಣ ಮಠದಲ್ಲಿ ಆಯೋಜಿಸಿದ್ದ ‘ಸಮುದಾಯ ಸಹಬಾಳ್ವೆ’ ಶಿಬಿರ ಉದ್ಘಾಟಿಸಿ ಮಾತನಾಡಿದರು. ಯುವಪೀಳಿಗೆಗೆ ಗ್ರಾಮೀಣ ಭಾಗದಲ್ಲಿನ ಸಮಸ್ಯೆಗಳ ಅರಿವು ಮೂಡಿಸುವ ಕೆಲಸವಾಗಬೇಕು. ಕೇವಲ ಕಾಲೇಜಿನಲ್ಲಿ ಕುಳಿತು ಕಲಿಯುವ ಜ್ಞಾನಾರ್ಜನೆಗಿಂತ ಹೊರಗಿನ ಜನರ ನೋವು, ನಲಿವು ಅರಿಯಬೇಕೆಂದು ಹೇಳಿದರು.</p>.<p>ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಹೆಚ್ಚು ಅನಾಹುತಗಳಾಗುತ್ತಿವೆ. ಈ ಕುರಿತು ಜಾಗೃತಿ ಅವಶ್ಯ. ಮಕ್ಕಳಲ್ಲಿ ತಾಯಿ ಪ್ರೇಮ, ಶಿಸ್ತು, ರಾಷ್ಟ್ರಭಕ್ತಿಯಂತಹ ಮೌಲ್ಯಗಳನ್ನು ಬೆಳೆಸಬೇಕು ಎಂದು ಕಿವಿಮಾತು ಹೇಳಿದರು.</p>.<p>ಚಿಕ್ಕಬಳ್ಳಾಪುರ ಕೆ.ವಿ.ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಪಿ.ಎನ್.ಶೇಖರ್ ಮಾತನಾಡಿ, ಶಿಕ್ಷಕರು ಸಮಾಜದ ಪರಿವರ್ತಕರು. ಆರೋಗ್ಯವಂತ ಸಮಾಜ ನಿರ್ಮಾಣ ಕಾರ್ಯದಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದು. ಶಿಕ್ಷಕರಲ್ಲಿ ಸಮರ್ಪಣಾ ಮನೋಭಾವ ಇರಬೇಕು. ಮಕ್ಕಳ ಮಾನಸಿಕ ಸಾಮರ್ಥ್ಯ ಅರ್ಥ ಮಾಡಿಕೊಂಡು ಬೋಧನೆ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದರು.</p>.<p>ಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ಮಾತನಾಡಿ, ಶಿಕ್ಷಕರು ನವಸಮಾಜದ ನಿರ್ಮಾಣಕ್ಕೆ ಪಣತೊಡಬೇಕೆಂದು ಕಿವಿಮಾತು ಹೇಳಿದರು.</p>.<p>ಚಿಂತಾಮಣಿ ಗಾಯಕ ಚಂದ್ರಶೇಖರ್, ಚಿಕ್ಕಬಳ್ಳಾಪುರ ಜಿಲ್ಲಾ ಸೇವಾದಳ ಸಂಚಾಲಕ ಪ್ರಕಾಶ್ ಅವರಿಂದ ಜಾಗೃತಿ ಗೀತೆಗಳ ಗಾಯನ ನಡೆಯಿತು. ಶ್ರೀ ಕೃಷ್ಣ ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ಆರ್.ಬಿ.ದೇಸಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಗ್ರಾಮಾಂತರ ಪ್ರದೇಶದ ಯುವಜನರು ಸ್ಥಳೀಯ ಸಮಸ್ಯೆಗಳ ಕುರಿತು ಜಾಗೃತರಾಗುವುದರ ಜತೆಗೆ ಅವುಗಳ ನಿವಾರಣೆಗಾಗಿ ಶ್ರಮಿಸುವುದು ಅಗತ್ಯ ಎಂದು ಬಸವ ಕಲ್ಯಾಣ ಮಠದ ಅಧ್ಯಕ್ಷ ಮಹದೇವಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಬಸವ ಕಲ್ಯಾಣ ಮಠದಲ್ಲಿ ಆಯೋಜಿಸಿದ್ದ ‘ಸಮುದಾಯ ಸಹಬಾಳ್ವೆ’ ಶಿಬಿರ ಉದ್ಘಾಟಿಸಿ ಮಾತನಾಡಿದರು. ಯುವಪೀಳಿಗೆಗೆ ಗ್ರಾಮೀಣ ಭಾಗದಲ್ಲಿನ ಸಮಸ್ಯೆಗಳ ಅರಿವು ಮೂಡಿಸುವ ಕೆಲಸವಾಗಬೇಕು. ಕೇವಲ ಕಾಲೇಜಿನಲ್ಲಿ ಕುಳಿತು ಕಲಿಯುವ ಜ್ಞಾನಾರ್ಜನೆಗಿಂತ ಹೊರಗಿನ ಜನರ ನೋವು, ನಲಿವು ಅರಿಯಬೇಕೆಂದು ಹೇಳಿದರು.</p>.<p>ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಹೆಚ್ಚು ಅನಾಹುತಗಳಾಗುತ್ತಿವೆ. ಈ ಕುರಿತು ಜಾಗೃತಿ ಅವಶ್ಯ. ಮಕ್ಕಳಲ್ಲಿ ತಾಯಿ ಪ್ರೇಮ, ಶಿಸ್ತು, ರಾಷ್ಟ್ರಭಕ್ತಿಯಂತಹ ಮೌಲ್ಯಗಳನ್ನು ಬೆಳೆಸಬೇಕು ಎಂದು ಕಿವಿಮಾತು ಹೇಳಿದರು.</p>.<p>ಚಿಕ್ಕಬಳ್ಳಾಪುರ ಕೆ.ವಿ.ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಪಿ.ಎನ್.ಶೇಖರ್ ಮಾತನಾಡಿ, ಶಿಕ್ಷಕರು ಸಮಾಜದ ಪರಿವರ್ತಕರು. ಆರೋಗ್ಯವಂತ ಸಮಾಜ ನಿರ್ಮಾಣ ಕಾರ್ಯದಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದು. ಶಿಕ್ಷಕರಲ್ಲಿ ಸಮರ್ಪಣಾ ಮನೋಭಾವ ಇರಬೇಕು. ಮಕ್ಕಳ ಮಾನಸಿಕ ಸಾಮರ್ಥ್ಯ ಅರ್ಥ ಮಾಡಿಕೊಂಡು ಬೋಧನೆ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದರು.</p>.<p>ಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ಮಾತನಾಡಿ, ಶಿಕ್ಷಕರು ನವಸಮಾಜದ ನಿರ್ಮಾಣಕ್ಕೆ ಪಣತೊಡಬೇಕೆಂದು ಕಿವಿಮಾತು ಹೇಳಿದರು.</p>.<p>ಚಿಂತಾಮಣಿ ಗಾಯಕ ಚಂದ್ರಶೇಖರ್, ಚಿಕ್ಕಬಳ್ಳಾಪುರ ಜಿಲ್ಲಾ ಸೇವಾದಳ ಸಂಚಾಲಕ ಪ್ರಕಾಶ್ ಅವರಿಂದ ಜಾಗೃತಿ ಗೀತೆಗಳ ಗಾಯನ ನಡೆಯಿತು. ಶ್ರೀ ಕೃಷ್ಣ ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ಆರ್.ಬಿ.ದೇಸಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>