ಚಿಕ್ಕಬಳ್ಳಾಪುರ ಕೆ.ವಿ.ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಪಿ.ಎನ್.ಶೇಖರ್ ಮಾತನಾಡಿ, ಶಿಕ್ಷಕರು ಸಮಾಜದ ಪರಿವರ್ತಕರು. ಆರೋಗ್ಯವಂತ ಸಮಾಜ ನಿರ್ಮಾಣ ಕಾರ್ಯದಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದು. ಶಿಕ್ಷಕರಲ್ಲಿ ಸಮರ್ಪಣಾ ಮನೋಭಾವ ಇರಬೇಕು. ಮಕ್ಕಳ ಮಾನಸಿಕ ಸಾಮರ್ಥ್ಯ ಅರ್ಥ ಮಾಡಿಕೊಂಡು ಬೋಧನೆ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದರು.