ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಪರಿಹಾರ ನಿಧಿಗೆ₹ 2 ಕೋಟಿ ನೀಡಿದ ಅಣ್ಣೇಶ್ವರ ಗ್ರಾ.ಪಂ

Last Updated 7 ಜೂನ್ 2020, 15:12 IST
ಅಕ್ಷರ ಗಾತ್ರ

ದೇವನಹಳ್ಳಿ: ಮುಖ್ಯಮಂತ್ರಿ ಪರಿಹಾರ ನಿಧಿಗೆ ತಾಲ್ಲೂಕಿನ ಅಣ್ಣೇಶ್ವರ ಗ್ರಾಮ ಪಂಚಾಯಿತಿ ವತಿಯಿಂದ ₹ 2 ಕೋಟಿ ನೀಡಲಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ ಮುರುಳಿ ಹೇಳಿದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ ನೇತೃತ್ವದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿ ಮಾಡಿ ಚೆಕ್ ನೀಡಲಾಗಿದೆ ಎಂದುಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ಶಿವಣ್ಣ ಮಾತನಾಡಿ, ಅಣ್ಣೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಒಳ ಮತ್ತು ಹೊರಗೆ ಜಾಹೀರಾತು ಫಲಕ ಮತ್ತು ಇತರ ತೆರಿಗೆ ಬಾಕಿ ₹ 50 ಕೋಟಿ ಇದೆ. ವಿವಿಧ ಕಂಪನಿಗಳು ತೆರಿಗೆ ನೀಡುತ್ತಿಲ್ಲ.ತೆರಿಗೆ ಹಣ ಸಕಾಲದಲ್ಲಿ ಬಂದಿದ್ದರೆ ಒಳ ಚರಂಡಿ ದುರಸ್ತಿಗೊಳಿಸುವ ಉದ್ದೇಶವನ್ನು ಪಂಚಾಯಿತಿ ಹೊಂದಿತ್ತು ಎಂದು ತಿಳಿಸಿದರು. ಪಿಡಿಒ ವೆಂಕಟೇಶ್ ಇನಾಂದಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT