ಮೃತರನ್ನು ಆಂಧ್ರಪ್ರದೇಶ ಮೂಲದ ಪವನ್(44) ಮತ್ತು ತಮಿಳುನಾಡಿನ ಜಗದೀಶ್(38) ಎಂದು ಗುರುತಿಸಲಾಗಿದೆ. ಇಬ್ಬರೂ ಹೈದರಾಬಾದ್ ಮೂಲದ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಗಳಾಗಿದ್ದರು. ಚೆನ್ನೈನಿಂದ ಬೆಂಗಳೂರಿಗೆ ಕಾರಿನಲ್ಲಿ ಬರುತ್ತಿದ್ದಾಗ ಬೆಳಿಗ್ಗೆ 6.30ರ ಸುಮಾರಿನಲ್ಲಿ ಯಡವನಹಳ್ಳಿ ಗೇಟ್ ಬಳಿ ಟಿಪ್ಪರ್ ಲಾರಿಯೊಂದು ಕಾರಿನ ಮೇಲೆ ಹರಿದಿದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ಕೆ.ವಿಶ್ವನಾಥ್ ತಿಳಿಸಿದರು.