ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೇಕಲ್: ಈಜಲು ಹೋದ ಇಬ್ಬರು ಸಾವು

Published 31 ಮೇ 2023, 16:02 IST
Last Updated 31 ಮೇ 2023, 16:02 IST
ಅಕ್ಷರ ಗಾತ್ರ

ಆನೇಕಲ್ : ಕ್ವಾರಿಯಲ್ಲಿ ಈಜಲು ಹೋದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹೆಬ್ಬಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಹುಲಿಮಂಗಲ ಸಮೀಪದ ಕ್ವಾರಿಯಲ್ಲಿ ನಡೆದಿದೆ.

ಮೃತ ಬಾಲಕರನ್ನು ಮಾರಗೊಂಡನಹಳ್ಳಿಯ ಫೈಜಲ್‌ ಖಾನ್‌(14) ಮತ್ತು ಹಾಸನ ಮೂಲದ ತೀರ್ಥೇಶ್‌(12) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಆಟವಾಡಲು ಹೋಗುವುದಾಗಿ ಹೇಳಿ ಸೈಕಲ್‌ನಲ್ಲಿ ಫೈಜಲ್‌ಖಾನ್‌ ಮತ್ತು ತೀರ್ಥೇಶ್‌ ಹೊರಟಿದ್ದರು.

ಮಂಗಳವಾರ ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಹೆಬ್ಬಗೋಡಿ ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು. ಬುಧವಾರ ಮಧ್ಯಾಹ್ನದ ಹುಲಿಮಂಗಲ ಸಮೀಪದ ಕ್ವಾರಿಯ ಬಳಿ ಸೈಕಲ್‌ ಮತ್ತು ಬಟ್ಟೆಗಳು ಸಿಕ್ಕಿದ್ದು, ಪೋಷಕರು ನೀಡಿದ ದೂರಿನನ್ವಯ ಪೊಲೀಸರು ಮತ್ತು ಸ್ಥಳೀಯರು ಶೋಧ ನಡೆಸಿದ್ದು ರಾತ್ರಿಯವರೆಗೂ ಪತ್ತೆಯಾಗಿರಲಿಲ್ಲ. ಹೆಬ್ಬಗೋಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಹೆಬ್ಬಗೋಡಿ ಸರ್ಕಲ್‌ ಇನ್‌ಸ್ಪೆಕ್ಟರ್‌ ಐಯನ್‌ ರೆಡ್ಡಿ ತಿಳಿಸಿದರು.

ಪ್ರತ್ಯೇಕ ಪ್ರಕರಣವೊಂದರಲ್ಲಿ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣೆ ವ್ಯಾಪ್ತಿಯ ಮೈಲಸಂದ್ರದ ಕೆರೆಯಲ್ಲಿ ಈಜಲು ಹೋದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ. ಮೃತ ಬಾಲಕನ್ನು ಜಿಶಾಂತ್‌(16) ಎಂದು ಗುರುತಿಸಲಾಗಿದೆ. ಎಲೆಕ್ಟ್ರಾನಿಕ್‌ಸಿಟಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಇನ್‌ಸ್ಪೆಕ್ಟರ್‌ ನಂಜೇಗೌಡ ತಿಳಿಸಿದರು.

ಕ್ವಾರಿಯ ಬಳಿ ಸೈಕಲ್ ಬಿದ್ದಿರುವುದು
ಕ್ವಾರಿಯ ಬಳಿ ಸೈಕಲ್ ಬಿದ್ದಿರುವುದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT