<p><strong>ವಿಜಯಪುರ:</strong> ಚನ್ನರಾಯಪಟ್ಟಣ ಹೋಬಳಿಯ ಬೆಟ್ಟಕೋಟೆ ಕೆರೆಯಲ್ಲಿ ಅನಧಿಕೃತವಾಗಿ ನೀರು ಸಾಗಾಣಿಕೆ ಮಾಡುತ್ತಿದ್ದ ಎರಡು ಟ್ಯಾಂಕರ್ಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಎಚ್.ಎನ್. ವ್ಯಾಲಿ ಯೋಜನೆಯಡಿ ಈ ಕೆರೆಗೆ ಹರಿದಿರುವ ನೀರನ್ನು ಅನುಮತಿ ಪಡೆಯದೆ ರಸ್ತೆ ಕಾಮಗಾರಿಗೆ ಟ್ಯಾಂಕರ್ಗಳ ಮೂಲಕ ಬಳಕೆ ಮಾಡಿಕೊಳ್ಳಲಾಗುತ್ತಿತ್ತು. ಇದರಿಂದ ಅಂತರ್ಜಲ ಮಟ್ಟ ಕುಸಿಯುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಸ್ಥಳೀಯರು ತಹಶೀಲ್ದಾರ್ಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನೀರು ಸಾಗಾಣಿಕೆ ಮಾಡುತ್ತಿದ್ದ ಎರಡು ಟ್ಯಾಂಕರ್ ಮತ್ತು ಮೋಟಾರ್ಸಹಿತ ಟ್ರ್ಯಾಕ್ಟರ್ ಅನ್ನು ಕಂದಾಯ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.</p>.<p>ಬೆಟ್ಟಕೋಟೆ ಕೆರೆಗೆ ಎಚ್.ಎನ್. ವ್ಯಾಲಿ ಯೋಜನೆಯಡಿ ನೀರು ಹರಿದಿದ್ದು ಕೆರೆ ಭರ್ತಿಯಾಗಿದೆ. ಕೆರೆಯ ಪಕ್ಕದಲ್ಲೇ ರಸ್ತೆ ಕಾಮಗಾರಿ ನಡೆಯುತ್ತಿರುವ ಕಾರಣ ಹೊರಬರುತ್ತಿರುವ ದೂಳಿನಿಂದ ರೈತರ ಬೆಳೆಗಳಿಗೆ ಹಾನಿಯುಂಟಾಗುತ್ತಿದೆ ಎಂದು ರೈತರಿಂದ ಹಲವಾರು ದೂರುಗಳು ಕೇಳಿ ಬಂದಿದ್ದವು.</p>.<p>ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರು ರಸ್ತೆಯಲ್ಲಿನ ದೂಳು ನಿಯಂತ್ರಣ ಮಾಡಲು ಪ್ರತ್ಯೇಕವಾಗಿ ನೀರು ಹಾಯಿಸುವ ಬದಲಾಗಿ ಕೆರೆಯಲ್ಲಿನ ನೀರಿಗೆ ಮೋಟಾರ್ಗಳನ್ನು ಇಟ್ಟು ನೀರು ಹೊರತೆಗೆಯುತ್ತಿರುವ ಬಗ್ಗೆ ಗಮನಹರಿಸಿದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು.</p>.<p>ತಹಶೀಲ್ದಾರ್ ಶಿವರಾಜ್ ಮಾತನಾಡಿ, ‘ಸಾರ್ವಜನಿಕರಿಂದ ಬಂದಿರುವ ದೂರುಗಳನ್ನು ಆಧರಿಸಿ ಇಲಾಖೆಯ ಸಿಬ್ಬಂದಿ ಕಳುಹಿಸಿ, ಕೆರೆಯಿಂದ ಅನುಮತಿ ಪಡೆಯದೆ ನೀರು ತೆಗೆಯುತ್ತಿದ್ದ ಟ್ಯಾಂಕರ್ಗಳು ಹಾಗೂ ಟ್ರ್ಯಾಕ್ಟರನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಮೇಲಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಚನ್ನರಾಯಪಟ್ಟಣ ಹೋಬಳಿಯ ಬೆಟ್ಟಕೋಟೆ ಕೆರೆಯಲ್ಲಿ ಅನಧಿಕೃತವಾಗಿ ನೀರು ಸಾಗಾಣಿಕೆ ಮಾಡುತ್ತಿದ್ದ ಎರಡು ಟ್ಯಾಂಕರ್ಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಎಚ್.ಎನ್. ವ್ಯಾಲಿ ಯೋಜನೆಯಡಿ ಈ ಕೆರೆಗೆ ಹರಿದಿರುವ ನೀರನ್ನು ಅನುಮತಿ ಪಡೆಯದೆ ರಸ್ತೆ ಕಾಮಗಾರಿಗೆ ಟ್ಯಾಂಕರ್ಗಳ ಮೂಲಕ ಬಳಕೆ ಮಾಡಿಕೊಳ್ಳಲಾಗುತ್ತಿತ್ತು. ಇದರಿಂದ ಅಂತರ್ಜಲ ಮಟ್ಟ ಕುಸಿಯುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಸ್ಥಳೀಯರು ತಹಶೀಲ್ದಾರ್ಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನೀರು ಸಾಗಾಣಿಕೆ ಮಾಡುತ್ತಿದ್ದ ಎರಡು ಟ್ಯಾಂಕರ್ ಮತ್ತು ಮೋಟಾರ್ಸಹಿತ ಟ್ರ್ಯಾಕ್ಟರ್ ಅನ್ನು ಕಂದಾಯ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.</p>.<p>ಬೆಟ್ಟಕೋಟೆ ಕೆರೆಗೆ ಎಚ್.ಎನ್. ವ್ಯಾಲಿ ಯೋಜನೆಯಡಿ ನೀರು ಹರಿದಿದ್ದು ಕೆರೆ ಭರ್ತಿಯಾಗಿದೆ. ಕೆರೆಯ ಪಕ್ಕದಲ್ಲೇ ರಸ್ತೆ ಕಾಮಗಾರಿ ನಡೆಯುತ್ತಿರುವ ಕಾರಣ ಹೊರಬರುತ್ತಿರುವ ದೂಳಿನಿಂದ ರೈತರ ಬೆಳೆಗಳಿಗೆ ಹಾನಿಯುಂಟಾಗುತ್ತಿದೆ ಎಂದು ರೈತರಿಂದ ಹಲವಾರು ದೂರುಗಳು ಕೇಳಿ ಬಂದಿದ್ದವು.</p>.<p>ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರು ರಸ್ತೆಯಲ್ಲಿನ ದೂಳು ನಿಯಂತ್ರಣ ಮಾಡಲು ಪ್ರತ್ಯೇಕವಾಗಿ ನೀರು ಹಾಯಿಸುವ ಬದಲಾಗಿ ಕೆರೆಯಲ್ಲಿನ ನೀರಿಗೆ ಮೋಟಾರ್ಗಳನ್ನು ಇಟ್ಟು ನೀರು ಹೊರತೆಗೆಯುತ್ತಿರುವ ಬಗ್ಗೆ ಗಮನಹರಿಸಿದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು.</p>.<p>ತಹಶೀಲ್ದಾರ್ ಶಿವರಾಜ್ ಮಾತನಾಡಿ, ‘ಸಾರ್ವಜನಿಕರಿಂದ ಬಂದಿರುವ ದೂರುಗಳನ್ನು ಆಧರಿಸಿ ಇಲಾಖೆಯ ಸಿಬ್ಬಂದಿ ಕಳುಹಿಸಿ, ಕೆರೆಯಿಂದ ಅನುಮತಿ ಪಡೆಯದೆ ನೀರು ತೆಗೆಯುತ್ತಿದ್ದ ಟ್ಯಾಂಕರ್ಗಳು ಹಾಗೂ ಟ್ರ್ಯಾಕ್ಟರನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಮೇಲಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>