ಮುದ್ರಣ ದೋಷದ ಬಗ್ಗೆ ಚುನಾವಣಾಧಿಕಾರಿಗೆ ದೂರು ನೀಡಿ ಮಾತನಾಡಿದ ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ನಾಗೇಂದ್ರ ರಾವ್ ಶಿಂಧೆ, ಇದು ಕೇವಲ ಮುದ್ರಣ ದೋಷವೆಂದು ಅನಿಸುವುದಿಲ್ಲ. ಜಿಲ್ಲಾ ಮುಖ್ಯ ಚುನಾವಣಾಧಿಕಾರಿ ಉದ್ದೇಶ ಪೂರ್ವಕವಾಗಿ ರಾಷ್ಟ್ರೀಯ ಪಕ್ಷಗಳಿಗೆ ಅನುಕೂಲ ಮಾಡುವ ಉದ್ದೇಶ ಹೊಂದಿದ್ದಾರೆ ಎಂದು ದೂರಿದರು.