ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಅಕ್ರಮ ತೆರವು ಕಾರ್ಯಾಚರಣೆ

ಗ್ರಾಮಾಂತರ ಜಿಲ್ಲೆಯ ವಿವಿಧೆಡೆ ಬಡಾವಣೆ ತೆರವು ಮುಂದುವರಿಕೆ
Last Updated 8 ಅಕ್ಟೋಬರ್ 2020, 2:40 IST
ಅಕ್ಷರ ಗಾತ್ರ

ಕನಸವಾಡಿ (ದೊಡ್ಡಬಳ್ಳಾಪುರ), ಸೂಲಿಬೆಲೆ: ಅಲ್ಲಲ್ಲಿ ಅಕ್ರಮ ಬಡಾವಣೆ ತೆರವು ಕಾರ್ಯ ಮುಂದುವರಿಸಿರುವ ಅಧಿಕಾರಿ ಗಳು ಬುಧವಾರ ಕನಸವಾಡಿ ಮತ್ತು ಸೂಲಿಬೆಲೆಯಲ್ಲಿ ತೆರವು ಕಾರ್ಯ ನಡೆಸಿದರು.

ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊನ್ನಾವರ ಗ್ರಾಮ ಸರ್ವೆ ನಂ.73ರಲ್ಲಿ 3 ಎಕರೆ, ನಾಗೇನಹಳ್ಳಿ ಗ್ರಾಮದ ಸರ್ವೆ ನಂ.54/9ರಲ್ಲಿ 9.20 ಎಕರೆ ಹಾಗೂ ಕೆಂಜಿಗನಹಳ್ಳಿ ಸರ್ವೆ ನಂ.69/1ರಲ್ಲಿ 1.31 ಎಕರೆ, ಸರ್ವೆ ನಂ.69/2ರಲ್ಲಿ 3 ಎಕರೆ ಸೇರಿ ಒಟ್ಟಾರೆ 17 ಎಕರೆ 11 ಗುಂಟೆ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಬಡಾವಣೆ ತೆರವುಗೊಳಿಸಲಾಗಿದೆ.

‘ಸದನ ಸಮಿತಿ ನಿರ್ದೇಶನ ಹಾಗೂ ಜಿಲ್ಲಾಧಿಕಾರಿ ಆದೇಶದಂತೆ ತಾಲ್ಲೂಕಿನ ಅನಧಿಕೃತ ಬಡಾವಣೆಗಳು ಅಂದರೆ ಭೂ ಪರಿವರ್ತನೆ ಆಗದೇ ಇರುವ ಹಾಗೂ ನಗರ ಯೋಜನಾ ಪ್ರಾಧಿಕಾರದ ಅನುಮತಿ ಪಡೆಯದೇ ಇರುವ ಬಡಾವಣೆಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ’ ಎಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.

ಮಧುರೆ ಹೋಬಳಿ ರಾಜಸ್ವ ನಿರೀಕ್ಷಕ ಮುನಿರಾಜು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT