<p><strong>ಕನಸವಾಡಿ (ದೊಡ್ಡಬಳ್ಳಾಪುರ), ಸೂಲಿಬೆಲೆ:</strong> ಅಲ್ಲಲ್ಲಿ ಅಕ್ರಮ ಬಡಾವಣೆ ತೆರವು ಕಾರ್ಯ ಮುಂದುವರಿಸಿರುವ ಅಧಿಕಾರಿ ಗಳು ಬುಧವಾರ ಕನಸವಾಡಿ ಮತ್ತು ಸೂಲಿಬೆಲೆಯಲ್ಲಿ ತೆರವು ಕಾರ್ಯ ನಡೆಸಿದರು.</p>.<p>ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊನ್ನಾವರ ಗ್ರಾಮ ಸರ್ವೆ ನಂ.73ರಲ್ಲಿ 3 ಎಕರೆ, ನಾಗೇನಹಳ್ಳಿ ಗ್ರಾಮದ ಸರ್ವೆ ನಂ.54/9ರಲ್ಲಿ 9.20 ಎಕರೆ ಹಾಗೂ ಕೆಂಜಿಗನಹಳ್ಳಿ ಸರ್ವೆ ನಂ.69/1ರಲ್ಲಿ 1.31 ಎಕರೆ, ಸರ್ವೆ ನಂ.69/2ರಲ್ಲಿ 3 ಎಕರೆ ಸೇರಿ ಒಟ್ಟಾರೆ 17 ಎಕರೆ 11 ಗುಂಟೆ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಬಡಾವಣೆ ತೆರವುಗೊಳಿಸಲಾಗಿದೆ.</p>.<p>‘ಸದನ ಸಮಿತಿ ನಿರ್ದೇಶನ ಹಾಗೂ ಜಿಲ್ಲಾಧಿಕಾರಿ ಆದೇಶದಂತೆ ತಾಲ್ಲೂಕಿನ ಅನಧಿಕೃತ ಬಡಾವಣೆಗಳು ಅಂದರೆ ಭೂ ಪರಿವರ್ತನೆ ಆಗದೇ ಇರುವ ಹಾಗೂ ನಗರ ಯೋಜನಾ ಪ್ರಾಧಿಕಾರದ ಅನುಮತಿ ಪಡೆಯದೇ ಇರುವ ಬಡಾವಣೆಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ’ ಎಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.</p>.<p>ಮಧುರೆ ಹೋಬಳಿ ರಾಜಸ್ವ ನಿರೀಕ್ಷಕ ಮುನಿರಾಜು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಸವಾಡಿ (ದೊಡ್ಡಬಳ್ಳಾಪುರ), ಸೂಲಿಬೆಲೆ:</strong> ಅಲ್ಲಲ್ಲಿ ಅಕ್ರಮ ಬಡಾವಣೆ ತೆರವು ಕಾರ್ಯ ಮುಂದುವರಿಸಿರುವ ಅಧಿಕಾರಿ ಗಳು ಬುಧವಾರ ಕನಸವಾಡಿ ಮತ್ತು ಸೂಲಿಬೆಲೆಯಲ್ಲಿ ತೆರವು ಕಾರ್ಯ ನಡೆಸಿದರು.</p>.<p>ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊನ್ನಾವರ ಗ್ರಾಮ ಸರ್ವೆ ನಂ.73ರಲ್ಲಿ 3 ಎಕರೆ, ನಾಗೇನಹಳ್ಳಿ ಗ್ರಾಮದ ಸರ್ವೆ ನಂ.54/9ರಲ್ಲಿ 9.20 ಎಕರೆ ಹಾಗೂ ಕೆಂಜಿಗನಹಳ್ಳಿ ಸರ್ವೆ ನಂ.69/1ರಲ್ಲಿ 1.31 ಎಕರೆ, ಸರ್ವೆ ನಂ.69/2ರಲ್ಲಿ 3 ಎಕರೆ ಸೇರಿ ಒಟ್ಟಾರೆ 17 ಎಕರೆ 11 ಗುಂಟೆ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಬಡಾವಣೆ ತೆರವುಗೊಳಿಸಲಾಗಿದೆ.</p>.<p>‘ಸದನ ಸಮಿತಿ ನಿರ್ದೇಶನ ಹಾಗೂ ಜಿಲ್ಲಾಧಿಕಾರಿ ಆದೇಶದಂತೆ ತಾಲ್ಲೂಕಿನ ಅನಧಿಕೃತ ಬಡಾವಣೆಗಳು ಅಂದರೆ ಭೂ ಪರಿವರ್ತನೆ ಆಗದೇ ಇರುವ ಹಾಗೂ ನಗರ ಯೋಜನಾ ಪ್ರಾಧಿಕಾರದ ಅನುಮತಿ ಪಡೆಯದೇ ಇರುವ ಬಡಾವಣೆಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ’ ಎಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.</p>.<p>ಮಧುರೆ ಹೋಬಳಿ ರಾಜಸ್ವ ನಿರೀಕ್ಷಕ ಮುನಿರಾಜು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>