ಮುಖ್ಯಾಧಿಕಾರಿ ವಿ. ಮೋಹನ್ ಕುಮಾರ್ ಮಾತನಾಡಿ, ‘ಸಂವಿಧಾನ ಜಾರಿಯಿಂದ ಎಲ್ಲಾ ವರ್ಗದ ಜನರು ಸಮಾನವಾಗಿ ಶಿಕ್ಷಣ ಕಲಿಯುತ್ತಿದ್ದೇವೆ. ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ಮೇಲೆಯೇ ದೇಶದ ಪ್ರತಿಯೊಬ್ಬರಿಗೂ ಸಮಾನತೆ, ಸ್ವಾತಂತ್ರ್ಯ, ಧರ್ಮ, ಸಂಸ್ಕೃತಿ, ಶಿಕ್ಷಣ ಮತ್ತು ಇತರೆ ಹಕ್ಕುಗಳು ಸಿಕ್ಕಿವೆ’ ಎಂದು ತಿಳಿಸಿದರು.