ಈ ಬಗ್ಗೆ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ, ಕೈಗಾರಿಕಾ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಲವು ಕಾರ್ಖಾನೆಗಳು ನಿಯಮಬಾಹಿರವಾಗಿ ರಾಸಾಯನಿಕ ಯುಕ್ತ ತ್ಯಾಜ್ಯವನ್ನು ಎಲ್ಲೆಂದರಲ್ಲಿ ತಂದು ಸುರಿಯುತ್ತಿದ್ದಾರೆ. ರಾತ್ರಿವೇಳೆ ಕಸದ ರಾಶಿಗೆ ಬೆಂಕಿ ಹೆಚ್ಚುತ್ತಿರುವುದರಿಂದ ಈ ಪ್ರದೇಶದಲ್ಲಿ ಪರಿಸರ ಮಾಲಿನ್ಯ ಉಂಟಾಗುವ ಜೊತೆಗೆ ಅಂತರ್ಜಲ ಕಲುಷಿತವಾಗುತ್ತಿದೆ. ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ಪರಿಸರ ಮಾಲಿನ್ಯ ಇಲಾಖೆಗೆ ದೂರು ನೀಡಿದ್ದರೂ ಇದುವರೆಗೂ ಕೈಗಾರಿಕೆಗಳ ವಿರುದ್ಧ ಕ್ರಮಕೈಗೊಂಡಿಲ್ಲ ಎಂದು ದೂರಿದರು.