ನಿವಾಸಿಗಳ ಮನವಿ ಮೇರೆಗೆ ಶಾಲೆಗೆ ಭೇಟಿ ನೀಡಿ ದುರಸ್ತಿ ಕಾಮಗಾರಿ ವೀಕ್ಷಿಸಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಅನುದಾನದಲ್ಲಿ ದುರಸ್ತಿ ಕಾಮಗಾರಿ ನಡೆದಿದೆ. ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಕಾಮಗಾರಿ ಕಳಪೆಯಿಂದ ಕೂಡಿದೆ. ಬಿರುಕು ಬಿಟ್ಟಿರುವ ಗೋಡೆ ಮತ್ತು ಚಾವಣಿ ಮೇಲೆ ಮಳೆ ನೀರು ಸೋರದಂತೆ ಚುರುಕಿ ಹಾಕಿಲ್ಲ. ಸ್ವಲ್ಪ ಮಳೆ ಬಿದ್ದರೂ ಮಳೆ ನೀರು ಶಾಲೆ ಒಳಗೆ ಇಳಿಯುತ್ತಿದೆ. ಕಾಮಗಾರಿ ಪೂರ್ಣಗೊಳಿಸುವ ತನಕ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಬಾರದು. ಶಾಲಾ ಮಕ್ಕಳು ಗುಂಡಿ ಒಳಗೆ ಬಿದ್ದು ನಿತ್ಯ ಗಾಯ ಮಾಡಿಕೊಳ್ಳುತ್ತಿದ್ದಾರೆ. ಸಂಬಂಧಿಸಿದವರು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.