<p><strong>ಕನಕಪುರ</strong>: ರಾಜ್ಯ ಸಹಕಾರ ಬ್ಯಾಂಕ್ಗಳ ಮೂಲಕ ರೈತರ ಕೃಷಿಗೆ ಅನುಕೂಲ ಆಗುವಂತೆ ಸಾಲ ನೀಡಲು ನಬಾರ್ಡ್ ಕೂಡಲೇ ಬಾಕಿ ಉಳಿಸಿಕೊಂಡಿರುವ ಹಣ ಬಿಡುಗಡೆ ಮಾಡಬೇಕು ಎಂದು ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಒತ್ತಾಯಿಸಿದರು.</p>.<p>ಕನಕಪುರ ರೈತ ಸಂಘದ ಕಚೇರಿಯಲ್ಲಿ ಗುರುವಾರ ನಡೆದ ರೈತ ಸಂಘದ ಸಭೆಯಲ್ಲಿ ಮಾತನಾಡಿದರು.</p>.<p>ರಾಜ್ಯಕ್ಕೆ ₹5,600ಕೋಟಿ ಸಾಲ ಕೊಡಬೇಕಿದೆ. ಆದರೆ,₹2,340ಕೋಟಿ ಬಿಡುಗಡೆ ಮಾಡಿದ್ದು ₹3,260 ಕೋಟಿ ಬಾಕಿ ಕೊಡಬೇಕಿದೆ. ಕೃಷಿ ಉತ್ತೇಜನಕ್ಕೆ ನಬಾರ್ಡ್ ಈ ಕೂಡಲೇ ಬಾಕಿ ಹಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.</p>.<p>ರೈತರಿಗೆ ಸೊಸೈಟಿಗಳಲ್ಲಿ ಬಡ್ಡಿರಹಿತ ಸಾಲ ಸಿಗದಿದ್ದರೆ ಅನಿವಾರ್ಯವಾಗಿ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಬಡ್ಡಿಸಹಿತ ಸಾಲ ಪಡೆಯಬೇಕಾಗುತ್ತದೆ. ಇದರಿಂದ ರೈತರಿಗೆ ಬಡ್ಡಿ ಹೊರೆಯಾಗಿ ಸಂಕಷ್ಟಕ್ಕೆ ಸಿಲುಕಿಕೊಳ್ಳಲಿದ್ದಾರೆ ಎಂದರು. </p>.<p>ಕೇಂದ್ರ ಸರ್ಕಾರ ಈ ಕೂಡಲೇ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದರು.</p>.<p>ಜಿಲ್ಲಾ ಕಾರ್ಯದರ್ಶಿ ಕುಮಾರ್, ಸಂಘಟನಾ ಕಾರ್ಯದರ್ಶಿ ಶಿವರಾಜ್, ತಾಲ್ಲೂಕು ಅಧ್ಯಕ್ಷ ಕೋಡಿಹಳ್ಳಿ ಕುಮಾರ್, ಮುಖಂಡರಾದ ರಂಗಪ್ಪ, ಸಿದ್ದಮರಿಗೌಡ, ಲೋಕೇಶ್, ಸಿದ್ದರಾಜು ಕೆಂಪಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ರಾಜ್ಯ ಸಹಕಾರ ಬ್ಯಾಂಕ್ಗಳ ಮೂಲಕ ರೈತರ ಕೃಷಿಗೆ ಅನುಕೂಲ ಆಗುವಂತೆ ಸಾಲ ನೀಡಲು ನಬಾರ್ಡ್ ಕೂಡಲೇ ಬಾಕಿ ಉಳಿಸಿಕೊಂಡಿರುವ ಹಣ ಬಿಡುಗಡೆ ಮಾಡಬೇಕು ಎಂದು ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಒತ್ತಾಯಿಸಿದರು.</p>.<p>ಕನಕಪುರ ರೈತ ಸಂಘದ ಕಚೇರಿಯಲ್ಲಿ ಗುರುವಾರ ನಡೆದ ರೈತ ಸಂಘದ ಸಭೆಯಲ್ಲಿ ಮಾತನಾಡಿದರು.</p>.<p>ರಾಜ್ಯಕ್ಕೆ ₹5,600ಕೋಟಿ ಸಾಲ ಕೊಡಬೇಕಿದೆ. ಆದರೆ,₹2,340ಕೋಟಿ ಬಿಡುಗಡೆ ಮಾಡಿದ್ದು ₹3,260 ಕೋಟಿ ಬಾಕಿ ಕೊಡಬೇಕಿದೆ. ಕೃಷಿ ಉತ್ತೇಜನಕ್ಕೆ ನಬಾರ್ಡ್ ಈ ಕೂಡಲೇ ಬಾಕಿ ಹಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.</p>.<p>ರೈತರಿಗೆ ಸೊಸೈಟಿಗಳಲ್ಲಿ ಬಡ್ಡಿರಹಿತ ಸಾಲ ಸಿಗದಿದ್ದರೆ ಅನಿವಾರ್ಯವಾಗಿ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಬಡ್ಡಿಸಹಿತ ಸಾಲ ಪಡೆಯಬೇಕಾಗುತ್ತದೆ. ಇದರಿಂದ ರೈತರಿಗೆ ಬಡ್ಡಿ ಹೊರೆಯಾಗಿ ಸಂಕಷ್ಟಕ್ಕೆ ಸಿಲುಕಿಕೊಳ್ಳಲಿದ್ದಾರೆ ಎಂದರು. </p>.<p>ಕೇಂದ್ರ ಸರ್ಕಾರ ಈ ಕೂಡಲೇ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದರು.</p>.<p>ಜಿಲ್ಲಾ ಕಾರ್ಯದರ್ಶಿ ಕುಮಾರ್, ಸಂಘಟನಾ ಕಾರ್ಯದರ್ಶಿ ಶಿವರಾಜ್, ತಾಲ್ಲೂಕು ಅಧ್ಯಕ್ಷ ಕೋಡಿಹಳ್ಳಿ ಕುಮಾರ್, ಮುಖಂಡರಾದ ರಂಗಪ್ಪ, ಸಿದ್ದಮರಿಗೌಡ, ಲೋಕೇಶ್, ಸಿದ್ದರಾಜು ಕೆಂಪಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>