ಮೇವು, ನೀರಿನ ಪೂರೈಕೆ ಹಾಗೂ ಪೌಷ್ಟಿಕ ಆಹಾರ ನೀಡುವ ಮೂಲಕ ರಾಸುಗಳನ್ನು ಸಂರಕ್ಷಿಸುವ ಬಗ್ಗೆ ರೈತರಿಗೆ ಮಾಹಿತಿ ಹಾಗೂ ಸಮತೋಲನ ಆಹಾರ ನೀಡುವುದನ್ನು ರೂಢಿಸಿಕೊಳ್ಳಬೇಕು. ರಾಸುಗಳಿಗೆ ಮನೆ ಹತ್ತಿರ ಅಜೋಲ ಬೆಳೆದು ರಾಸುಗಳಿಗೆ ನೀಡಿದರೆ ಹೆಚ್ಚಿನ ಹಾಲು ಉತ್ಪಾದನೆಯಾಗುತ್ತದೆ. ರೈತರಿಗೆ ಅನುಕೂಲವಾಗುವಂತೆ ಮೇವು ಕತ್ತರಿಸುವ ಯಂತ್ರ. ಹಾಲು ಕರೆಯುವ ಯಂತ್ರವನ್ನು ಸಬ್ಸಿಡಿಯಲ್ಲಿ ಪಡೆಯಬಹುದು ಎಂದರು. ವಿಸ್ತರಣಾಧಿಕಾರಿ ಹನುಮಂತಪ್ಪ, ಕಾರ್ಯದರ್ಶಿ ಮುನಿನಾರಾಯಣಪ್ಪ, ಹಾಲು ಪರೀಕ್ಷಕ ಮುನಿರಾಜ್, ಸಹಾಯಕ ಕೃಷ್ಣ, ಹಾಗೂ ಪಶು ವೈದ್ಯಾಧಿಕಾರಿಗಳು ಹಾಜರಿದ್ದರು.