<p><strong>ವಿಜಯಪುರ (ದೇವನಹಳ್ಳಿ):</strong> ವಚನಗಳು ನೈತಿಕ ಜೀವನ ಮೌಲ್ಯಗಳನ್ನು ಬೋಧಿಸುವ ನಾಡಿನ ಪ್ರಭಾವಿ ಸಾಹಿತ್ಯ ಮಾಧ್ಯಮವಾಗಿದೆ ಎಂದು ಶರಣ ಸಮ್ಮೇಳನ ಅಧ್ಯಕ್ಷ ವನಕಲ್ಲು ಮಠದ ಬಸವ ರಮಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು. </p>.<p>ಪಟ್ಟಣದ ಗಾಂಧಿ ಚೌಕದಲ್ಲಿ ಮಂಗಳವಾರ ನಡೆದ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಮಾನತೆ, ಶ್ರಮಿಕ, ಕಾಯಕ, ದಾಸೋಹದ ನೆಲೆಯಲ್ಲಿ ವಚನ ಸಾಹಿತ್ಯ ಪ್ರಮುಖವಾದದ್ದು ಎಂದರು.</p>.<p>ಕಾಯಕ ಮತ್ತು ದಾಸೋಹ ಸಿದ್ಧಾಂತಗಳ ಮೂಲಕ ಸಮಪಾಲು, ಸಮಬಾಳು ಸಿದ್ಧಾಂತವನ್ನು ಮಂಡಿಸಬಲ್ಲ ಚಳವಳಿ ಭಾರತೀಯ ಸಂಸ್ಕೃತಿಯಲ್ಲಿ ಪ್ರಮುಖವಾಗಿವೆ ಎಂದರು.</p>.<p>ಇದೇ ಸಂದರ್ಭದಲ್ಲಿ ಗ್ರಾಮಾಂತರ ಜಿಲ್ಲಾ ಉತ್ಸವ, ಜಿಲ್ಲಾ ಸಹಕಾರಿ ಸಮ್ಮೇಳನ, ನಟ ವಿಷ್ಣುವರ್ಧನ್ ಜನ್ಮದಿನ ಅಮೃತಮಹೋತ್ಸವ ಕೂಡ ನಡೆಯಿತು.</p>.<p>ಅಖಿಲ ಕರ್ನಾಟಕ ಮಿತ್ರ ಸಂಘ, ಜಿಲ್ಲಾ ಕದಳಿ ವೇದಿಕೆ, ಜಿಲ್ಲಾ ಶರಣಸಾಹಿತ್ಯ ಪರಿಷತ್ತು, ರಾಷ್ಟ್ರೀಯ ಬಸವದಳ, ಅಕ್ಕನ ಬಳಗದ ಆಶ್ರಯದಲ್ಲಿ ಶರಣ ಸಮ್ಮೇಳನ ನಡೆಯಿತು. </p>.<p>ಮಿತ್ರಸಂಘದ ಅಧ್ಯಕ್ಷ ಚಿ.ಮಾ.ಸುಧಾಕರ್, ಗ್ರಾಮಾಂತರ ಜಿಲ್ಲಾ ಉತ್ಸವ ಅಧ್ಯಕ್ಷ ಹಾರಗದ್ದೆ ಆತ್ಮಾನಂದ ಗುರೂಜಿ ದಂಡಪಾಣಿ, ಜಿಲ್ಲಾ ಸಹಕಾರಿ ಸಮ್ಮೇಳನ ಅಧ್ಯಕ್ಷ ವೆಂಕಟಾಪುರ ಲಕ್ಷ್ಮಣ್, ಕದಳಿ ವೇದಿಕೆಯ ಜಿಲ್ಲಾಧ್ಯಕ್ಷೆ ಬಿ.ಸ್ವರ್ಣಗೌರಿ ಮಹದೇವ್ ಮಾತನಾಡಿದರು.</p>.<p>ತಾಲ್ಲೂಕು ಶರಣಸಾಹಿತ್ಯ ಪರಿಷತ್ತು ಅಧ್ಯಕ್ಷ ಮ.ಸುರೇಶ್ ಬಾಬು ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ವಿ.ವಿಶ್ವನಾಥ್, ಆರ್.ಮುನಿರಾಜು, ಕೆ.ಎಚ್.ಚಂದ್ರಶೇಖರ್, ಎ.ಬಿ.ಪರಮೇಶ್, ಶ್ರೀನಿವಾಸ್, ಚಿದಾನಂದ ಬಿರಾದಾರ್, ರಾಷ್ಟ್ರೀಯ ಬಸವದಳದ ಅಧ್ಯಕ್ಷ ಬೇಕರಿ ವಿ.ಶಿವಣ್ಣ, ಖಜಾಂಚಿ ಮ.ಜಯದೇವ್, ಹೊಸಕೋಟೆಯ ಚೌಡೇಗೌಡ, ಡಾ.ವಿಷ್ಣುವರ್ಧನ್ ಅಭಿಮಾನಿಗಳ ಸಂಘದ ಅಧ್ಯಕ್ಷ ಜಿ.ಎಂ.ಚಂದ್ರು,ಕರವೇ ಮಹೇಶ್, ಜಿಲ್ಲಾ ಶಸಾಪ ಅಧ್ಯಕ್ಷ ಚಂದ್ರಶೇಖರ್ ಹಡಪದ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ದೇವನಹಳ್ಳಿ):</strong> ವಚನಗಳು ನೈತಿಕ ಜೀವನ ಮೌಲ್ಯಗಳನ್ನು ಬೋಧಿಸುವ ನಾಡಿನ ಪ್ರಭಾವಿ ಸಾಹಿತ್ಯ ಮಾಧ್ಯಮವಾಗಿದೆ ಎಂದು ಶರಣ ಸಮ್ಮೇಳನ ಅಧ್ಯಕ್ಷ ವನಕಲ್ಲು ಮಠದ ಬಸವ ರಮಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು. </p>.<p>ಪಟ್ಟಣದ ಗಾಂಧಿ ಚೌಕದಲ್ಲಿ ಮಂಗಳವಾರ ನಡೆದ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಮಾನತೆ, ಶ್ರಮಿಕ, ಕಾಯಕ, ದಾಸೋಹದ ನೆಲೆಯಲ್ಲಿ ವಚನ ಸಾಹಿತ್ಯ ಪ್ರಮುಖವಾದದ್ದು ಎಂದರು.</p>.<p>ಕಾಯಕ ಮತ್ತು ದಾಸೋಹ ಸಿದ್ಧಾಂತಗಳ ಮೂಲಕ ಸಮಪಾಲು, ಸಮಬಾಳು ಸಿದ್ಧಾಂತವನ್ನು ಮಂಡಿಸಬಲ್ಲ ಚಳವಳಿ ಭಾರತೀಯ ಸಂಸ್ಕೃತಿಯಲ್ಲಿ ಪ್ರಮುಖವಾಗಿವೆ ಎಂದರು.</p>.<p>ಇದೇ ಸಂದರ್ಭದಲ್ಲಿ ಗ್ರಾಮಾಂತರ ಜಿಲ್ಲಾ ಉತ್ಸವ, ಜಿಲ್ಲಾ ಸಹಕಾರಿ ಸಮ್ಮೇಳನ, ನಟ ವಿಷ್ಣುವರ್ಧನ್ ಜನ್ಮದಿನ ಅಮೃತಮಹೋತ್ಸವ ಕೂಡ ನಡೆಯಿತು.</p>.<p>ಅಖಿಲ ಕರ್ನಾಟಕ ಮಿತ್ರ ಸಂಘ, ಜಿಲ್ಲಾ ಕದಳಿ ವೇದಿಕೆ, ಜಿಲ್ಲಾ ಶರಣಸಾಹಿತ್ಯ ಪರಿಷತ್ತು, ರಾಷ್ಟ್ರೀಯ ಬಸವದಳ, ಅಕ್ಕನ ಬಳಗದ ಆಶ್ರಯದಲ್ಲಿ ಶರಣ ಸಮ್ಮೇಳನ ನಡೆಯಿತು. </p>.<p>ಮಿತ್ರಸಂಘದ ಅಧ್ಯಕ್ಷ ಚಿ.ಮಾ.ಸುಧಾಕರ್, ಗ್ರಾಮಾಂತರ ಜಿಲ್ಲಾ ಉತ್ಸವ ಅಧ್ಯಕ್ಷ ಹಾರಗದ್ದೆ ಆತ್ಮಾನಂದ ಗುರೂಜಿ ದಂಡಪಾಣಿ, ಜಿಲ್ಲಾ ಸಹಕಾರಿ ಸಮ್ಮೇಳನ ಅಧ್ಯಕ್ಷ ವೆಂಕಟಾಪುರ ಲಕ್ಷ್ಮಣ್, ಕದಳಿ ವೇದಿಕೆಯ ಜಿಲ್ಲಾಧ್ಯಕ್ಷೆ ಬಿ.ಸ್ವರ್ಣಗೌರಿ ಮಹದೇವ್ ಮಾತನಾಡಿದರು.</p>.<p>ತಾಲ್ಲೂಕು ಶರಣಸಾಹಿತ್ಯ ಪರಿಷತ್ತು ಅಧ್ಯಕ್ಷ ಮ.ಸುರೇಶ್ ಬಾಬು ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ವಿ.ವಿಶ್ವನಾಥ್, ಆರ್.ಮುನಿರಾಜು, ಕೆ.ಎಚ್.ಚಂದ್ರಶೇಖರ್, ಎ.ಬಿ.ಪರಮೇಶ್, ಶ್ರೀನಿವಾಸ್, ಚಿದಾನಂದ ಬಿರಾದಾರ್, ರಾಷ್ಟ್ರೀಯ ಬಸವದಳದ ಅಧ್ಯಕ್ಷ ಬೇಕರಿ ವಿ.ಶಿವಣ್ಣ, ಖಜಾಂಚಿ ಮ.ಜಯದೇವ್, ಹೊಸಕೋಟೆಯ ಚೌಡೇಗೌಡ, ಡಾ.ವಿಷ್ಣುವರ್ಧನ್ ಅಭಿಮಾನಿಗಳ ಸಂಘದ ಅಧ್ಯಕ್ಷ ಜಿ.ಎಂ.ಚಂದ್ರು,ಕರವೇ ಮಹೇಶ್, ಜಿಲ್ಲಾ ಶಸಾಪ ಅಧ್ಯಕ್ಷ ಚಂದ್ರಶೇಖರ್ ಹಡಪದ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>