ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿರುಮಲ ವೆಂಕಟೇಶ್ವರ ದೇಗುಲದಲ್ಲಿ ವೈಕುಂಠ ಏಕಾದಶಿ 

Last Updated 17 ಡಿಸೆಂಬರ್ 2018, 12:36 IST
ಅಕ್ಷರ ಗಾತ್ರ

ದೇವನಹಳ್ಳಿ: ’ಹೊಸಕೋಟೆ ತಾಲ್ಲೂಕಿನ ಎಚ್.ಬೇಗೂರು ಗ್ರಾಮದ ಐತಿಹಾಸಿಕ ಶ್ರೀ‌ತಿರುಮಲ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ಡಿ.18ರಂದು ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ನಡೆಯಲಿದೆ’ ಎಂದು ದೇವಾಲಯದ ಅರ್ಚಕ ಅಶ್ವತ್ಥ್ ತಿಳಿಸಿದ್ದಾರೆ.

ಮಧ್ಯರಾತ್ರಿ 1ರಿಂದ ಸುಪ್ರಭಾತ ಸೇವೆಯೊಂದಿಗೆ ದೇವರಿಗೆ ಅಭಿಷೇಕ ಮತ್ತು ಅಲಂಕಾರದ ನಡೆಯಲಿದೆ. ಮುಂಜಾನೆ 5ಕ್ಕೆ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಮತ್ತು ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ನಂತರ ಮಹಾಮಂಗಳಾರತಿ, ತೀರ್ಥ– ಪ್ರಸಾದ ವಿನಿಯೋಗ ನಡೆಯಲಿದೆ. ರಾತ್ರಿ 7ಕ್ಕೆ ದೇವರ ಉತ್ಸವ ಹಾಗೂ ಉಯ್ಯಾಲೋತ್ಸವ ಏರ್ಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT