ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ವಾಲ್ಮೀಕಿ ಜಯಂತಿ ಆಚರಣೆ

Last Updated 2 ನವೆಂಬರ್ 2020, 1:47 IST
ಅಕ್ಷರ ಗಾತ್ರ

ವಿಜಯಪುರ: ‘ವಾಲ್ಮೀಕಿ ಜೀವನ, ಆದರ್ಶವನ್ನು ಸ್ಫೂರ್ತಿಯಾಗಿಟ್ಟುಕೊಂಡು ಸಾಧನೆ ಮಾಡಲು ಮುಂದಾದಾಗ ಅವರ ಜಯಂತಿ ಆಚರಣೆಗೆ ನಿಜವಾದ ಅರ್ಥ ಬರಲಿದೆ’ ಎಂದು ಸೀನಿಯರ್ ಜೇಸಿಸ್ ಅಧ್ಯಕ್ಷ ವಿ.ಎನ್. ರಮೇಶ್ ಹೇಳಿದರು.

ಪಟ್ಟಣದ ರಾಷ್ಟ್ರೀಯ ಬಾಲಕಾರ್ಮಿಕ ವಿಶೇಷ ಶಾಲೆಯಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿದರು.

ವಾಲ್ಮೀಕಿ ರಾಮಾಯಣ ಮಹಾಕಾವ್ಯದ ಮೂಲಕ ಭಾರತದ ಸಂಸ್ಕೃತಿ ಬಗ್ಗೆ ತಿಳಿಸಿಕೊಟ್ಟರು. ಶ್ರೀರಾಮ ಎಂದರೆ ಪಿತೃವಾಕ್ಯ ಪರಿಪಾಲಕ, ಏಕಪತ್ನಿ ವ್ರತಸ್ಥ, ಮರ್ಯಾದೆ ಪುರುಷೋತ್ತಮ ಎನ್ನುವ ಪವಿತ್ರ ಬಾಂಧವ್ಯ ತಿಳಿಸಿದ ವಾಲ್ಮೀಕಿ ಅವರನ್ನು ನಾವೆಲ್ಲರೂ ಪ್ರತಿನಿತ್ಯ ನೆನೆಯಬೇಕು ಎಂದು ಹೇಳಿದರು.

ರಾಷ್ಟ್ರೀಯ ಬಾಲಕಾರ್ಮಿಕ ವಿಶೇಷ ಶಾಲೆಯ ವೃತ್ತಿಪರ ಶಿಕ್ಷಕಿ ಮೀನಾಕ್ಷಿ,ಭಾರತೀಯ ಜನಜಾಗೃತಿ ಸೇನೆ ರಾಜ್ಯ ಘಟಕದ ಅಧ್ಯಕ್ಷ ಸಿ. ಮುನಿಯಪ್ಪ ಮಾತನಾಡಿದರು. ಶಿಕ್ಷಕ ಶಿವಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT