<p><strong>ಹೊಸಕೋಟೆ</strong>: ಸಾಹಿತಿ ಬಾಗೇಪಲ್ಲಿ ಕೃಷ್ಣಮೂರ್ತಿ ಅವರು ಅನುವಾದದ ರವೀಂದ್ರನಾಥ್ ಟ್ಯಾಗೋರ್ ಅವರ ‘ದಿ ಗಾರ್ಡಿನರ್’ ಕೃತಿಯ ಕನ್ನಡ ಭಾವಾನುವಾದ ‘ವನಮಾಲಿ’ ಪುಸ್ತಕ ಬಿಡುಗಡೆ ನಗರದಲ್ಲಿ ಭಾನುವಾರ ನಡೆಯಿತು.</p>.<p>ವಿಜ್ಞಾನ ವಿಜ್ಞಾನ ಪರಿಷತ್ತಿನ ಮಾಜಿ ಕಾರ್ಯದರ್ಶಿ ಪ್ರೊ.ಎಂ.ಆರ್.ನಾಗರಾಜ್ ಮಾತನಾಡಿ, ಅನುವಾದ ಎಂಬುದು ಕಡು ಕಷ್ಟದ ಕೆಲಸ. ಮೂಲ ಕೃತಿಯಷ್ಟೇ ರಸಾನುಭವವನ್ನು ಅದು ಕೊಡದೆ ಇದ್ದರೂ ಭಾಷಾ ಗಡಿ ಮೀರಿ ಸಾಹಿತ್ಯ ಅರಿತುಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.</p>.<p>ನ್ಯಾಷನಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ನಗರಗೆರೆ ರಮೇಶ್ ಮಾತನಾಡಿ, ಭಾರತಕ್ಕೆ ಮೊಟ್ಟ ಮೊದಲ ನೊಬೆಲ್ ತಂದುಕೊಟ್ಟ ಕೀರ್ತಿ ರವೀಂದ್ರ ನಾಥ್ ಟ್ಯಾಗೋರ್ ಅವರಿಗೆ ಸಲ್ಲುತ್ತದೆ. ಅಂತಹ ಮಹಾನ್ ಕವಿಯ ಕೃತಿಯನ್ನು ‘ವನಮಾಲಿ: ಹೆಸರಿನಲ್ಲಿ ಕನ್ನಡಕ್ಕೆ ತಂದಿರುವ ಬಾಗೇಪಲ್ಲಿ ಕೃಷ್ಣಮೂರ್ತಿ ಅವರ ಕೆಲಸ ನಿಜಕ್ಕೂ ಶ್ಲಾಘನೀಯ ಎಂದರು.</p>.<p>ಕೃತಿಕಾರ ಬಾಗೆಪಲ್ಲಿ ಕೃಷ್ಣಮೂರ್ತಿ, ನಗರಸಭೆ ಮಾಜಿ ಅಧ್ಯಕ್ಷ ಕುಳ್ಳಾ ನಾಗರಾಜ್, ಸದಸ್ಯ ಸೋಮಣ್ಣ, ಮನವ ಹಕ್ಕುಗಳ ಹೋರಾಟಗಾರ ವರದಾಪುರ ನಾಗರಾಜ್, ವಕೀಲ್ ನಾಗರಾಜ್, ಪತ್ರಕರ್ತರ ಸಂಘದ ಅಧ್ಯಕ್ಷ ಶಿವನಾಪುರ ಡಿ.ನಾಗರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ</strong>: ಸಾಹಿತಿ ಬಾಗೇಪಲ್ಲಿ ಕೃಷ್ಣಮೂರ್ತಿ ಅವರು ಅನುವಾದದ ರವೀಂದ್ರನಾಥ್ ಟ್ಯಾಗೋರ್ ಅವರ ‘ದಿ ಗಾರ್ಡಿನರ್’ ಕೃತಿಯ ಕನ್ನಡ ಭಾವಾನುವಾದ ‘ವನಮಾಲಿ’ ಪುಸ್ತಕ ಬಿಡುಗಡೆ ನಗರದಲ್ಲಿ ಭಾನುವಾರ ನಡೆಯಿತು.</p>.<p>ವಿಜ್ಞಾನ ವಿಜ್ಞಾನ ಪರಿಷತ್ತಿನ ಮಾಜಿ ಕಾರ್ಯದರ್ಶಿ ಪ್ರೊ.ಎಂ.ಆರ್.ನಾಗರಾಜ್ ಮಾತನಾಡಿ, ಅನುವಾದ ಎಂಬುದು ಕಡು ಕಷ್ಟದ ಕೆಲಸ. ಮೂಲ ಕೃತಿಯಷ್ಟೇ ರಸಾನುಭವವನ್ನು ಅದು ಕೊಡದೆ ಇದ್ದರೂ ಭಾಷಾ ಗಡಿ ಮೀರಿ ಸಾಹಿತ್ಯ ಅರಿತುಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.</p>.<p>ನ್ಯಾಷನಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ನಗರಗೆರೆ ರಮೇಶ್ ಮಾತನಾಡಿ, ಭಾರತಕ್ಕೆ ಮೊಟ್ಟ ಮೊದಲ ನೊಬೆಲ್ ತಂದುಕೊಟ್ಟ ಕೀರ್ತಿ ರವೀಂದ್ರ ನಾಥ್ ಟ್ಯಾಗೋರ್ ಅವರಿಗೆ ಸಲ್ಲುತ್ತದೆ. ಅಂತಹ ಮಹಾನ್ ಕವಿಯ ಕೃತಿಯನ್ನು ‘ವನಮಾಲಿ: ಹೆಸರಿನಲ್ಲಿ ಕನ್ನಡಕ್ಕೆ ತಂದಿರುವ ಬಾಗೇಪಲ್ಲಿ ಕೃಷ್ಣಮೂರ್ತಿ ಅವರ ಕೆಲಸ ನಿಜಕ್ಕೂ ಶ್ಲಾಘನೀಯ ಎಂದರು.</p>.<p>ಕೃತಿಕಾರ ಬಾಗೆಪಲ್ಲಿ ಕೃಷ್ಣಮೂರ್ತಿ, ನಗರಸಭೆ ಮಾಜಿ ಅಧ್ಯಕ್ಷ ಕುಳ್ಳಾ ನಾಗರಾಜ್, ಸದಸ್ಯ ಸೋಮಣ್ಣ, ಮನವ ಹಕ್ಕುಗಳ ಹೋರಾಟಗಾರ ವರದಾಪುರ ನಾಗರಾಜ್, ವಕೀಲ್ ನಾಗರಾಜ್, ಪತ್ರಕರ್ತರ ಸಂಘದ ಅಧ್ಯಕ್ಷ ಶಿವನಾಪುರ ಡಿ.ನಾಗರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>