ಗೃಹಿಣಿ ಸೌಮ್ಯಶ್ರೀ ಮಾತನಾಡಿ, ‘ಸಂಪತ್ತಿನ ಅಧಿದೇವತೆ ಲಕ್ಷ್ಮಿಯನ್ನು ಈ ದಿನ ಪೂಜಿಸಿದರೆ, ಅಷ್ಟ ಐಶ್ವರ್ಯ ಪ್ರಾಪ್ತಿಯಾಗುತ್ತದೆ. ಲಕ್ಷ್ಮಿದೇವಿಯನ್ನು ಎಂಟು ರೂಪಗಳ ಸಂಪತ್ತಿಗೆ ಹೋಲಿಕೆ ಮಾಡುತ್ತಾರೆ. ಜ್ಞಾನ, ಐಶ್ವರ್ಯ, ಸುಖ, ಆರೋಗ್ಯ, ಧನ, ಧಾನ್ಯ, ಜಯ, ವಿಜಯ ಇವುಗಳನ್ನು ಲಕ್ಷ್ಮಿಯ ಲಕ್ಷಣಗಳೆಂದು ಹಿರಿಯರು ಹೇಳುತ್ತಾರೆ. ವರಮಹಾಲಕ್ಷ್ಮಿ ವ್ರತ ಆಚರಿಸಿದರೆ ಅಷ್ಟ ಐಶ್ವರ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. ಹಾಗಾಗಿ ಪ್ರತಿವರ್ಷವೂ ಸಂಭ್ರಮದಿಂದ ಹಬ್ಬ ಆಚರಣೆ ಮಾಡುತ್ತೇವೆ’ ಎಂದರು.