<p><strong>ಆನೇಕಲ್</strong>: ತಾಲ್ಲೂಕಿನ ಹೆನ್ನಾಗರ ಗ್ರಾಮ ಪಂಚಾಯಿತಿ ಆವರಣದದಲ್ಲಿ ಬುದ್ಧ, ಬಸವಣ್ಣ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಉದ್ಘಾಟನೆ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ, ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮವು ಫೆ. 18ರಂದು ನಡೆಯಲಿದೆ ಎಂದು ಅಧ್ಯಕ್ಷೆ ಎಂ. ಮುನಿರತ್ನ ತಿಳಿಸಿದರು.</p>.<p>ತಾಲ್ಲೂಕಿನ ಹೆನ್ನಾಗರದಲ್ಲಿ ಕಾರ್ಯಕ್ರಮದ ಮಾಹಿತಿ ಪುಸ್ತಿಕೆ ಬಿಡುಗಡೆಗೊಳಿಸಿ ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಂಥಾಲಯ ಕಟ್ಟಡ, ಅಂಗನವಾಡಿ ಕಟ್ಟಡಗಳು, ಸ್ತ್ರೀಶಕ್ತಿ ಭವನ, ಹೈಮಾಸ್ಟ್ ದೀಪದ ಉದ್ಘಾಟನೆ ಕಾರ್ಯಕ್ರಮ ರೂಪಿಸಲಾಗಿದೆ. ತಾಲ್ಲೂಕಿನಲ್ಲಿ ಇದೇ ಮೊದಲ ಬಾರಿಗೆ ರೈತರಿಗೆ ಅನುಕೂಲ ಮಾಡಿಕೊಡಲು ಹಸು ಸಾಕಾಣಿಕೆಗೆ ಸಹಾಯಧನ, ಅಡುಗೆ ಅನಿಲ ಸಿಲಿಂಡರ್ ವಿತರಣಾ ಕಾರ್ಯಕ್ರಮ ನಡೆಯಲಿದೆ. ₹ 16 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.</p>.<p>ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದ ಡಿ.ಕೆ. ಸುರೇಶ್, ವಿಧಾನ ಪರಿಷತ್ ಸದಸ್ಯರಾದ ಗೋಪಿನಾಥ ರೆಡ್ಡಿ, ಪುಟ್ಟಣ್ಣ, ಅ. ದೇವೇಗೌಡ, ಪಿ.ಆರ್. ರಮೇಶ್ ಪಾಲ್ಗೊಳ್ಳಲಿದ್ದಾರೆ ಎಂದರು.</p>.<p>ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಚ್.ಜೆ. ಪ್ರಸನ್ನಕುಮಾರ್ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯಲ್ಲಿ ಶಿಕ್ಷಣ, ಮಹಿಳಾ ಸಬಲೀಕರಣ, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ವಿವಿಧ ಯೋಜನೆಯಡಿ ನೆರವು ಸೇರಿದಂತೆ ವಿವಿಧ ಕಾರ್ಯಕ್ರಮ ರೂಪಿಸಲಾಗಿದೆ. ಪಂಚಾಯಿತಿಯ ಅಭಿವೃದ್ಧಿ ಕೈಪಿಡಿಯನ್ನು ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಗುವುದು ಎಂದರು.</p>.<p>ಗ್ರಾಮ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಸದಸ್ಯ ಕಿರಣ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಕಾಂತರಾಜು, ಅಶೋಕ್, ದೀಪ, ಮನು, ಶಿವರಾಜು, ಲೋಕನಾಥ್, ಮಾಜಿ ಸದಸ್ಯ ಆರ್.ಎಸ್. ಪ್ರಕಾಶ್, ಮಂಜು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿದ್ದರಾಜು, ಕಾರ್ಯದರ್ಶಿ ತೇಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್</strong>: ತಾಲ್ಲೂಕಿನ ಹೆನ್ನಾಗರ ಗ್ರಾಮ ಪಂಚಾಯಿತಿ ಆವರಣದದಲ್ಲಿ ಬುದ್ಧ, ಬಸವಣ್ಣ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಉದ್ಘಾಟನೆ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ, ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮವು ಫೆ. 18ರಂದು ನಡೆಯಲಿದೆ ಎಂದು ಅಧ್ಯಕ್ಷೆ ಎಂ. ಮುನಿರತ್ನ ತಿಳಿಸಿದರು.</p>.<p>ತಾಲ್ಲೂಕಿನ ಹೆನ್ನಾಗರದಲ್ಲಿ ಕಾರ್ಯಕ್ರಮದ ಮಾಹಿತಿ ಪುಸ್ತಿಕೆ ಬಿಡುಗಡೆಗೊಳಿಸಿ ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಂಥಾಲಯ ಕಟ್ಟಡ, ಅಂಗನವಾಡಿ ಕಟ್ಟಡಗಳು, ಸ್ತ್ರೀಶಕ್ತಿ ಭವನ, ಹೈಮಾಸ್ಟ್ ದೀಪದ ಉದ್ಘಾಟನೆ ಕಾರ್ಯಕ್ರಮ ರೂಪಿಸಲಾಗಿದೆ. ತಾಲ್ಲೂಕಿನಲ್ಲಿ ಇದೇ ಮೊದಲ ಬಾರಿಗೆ ರೈತರಿಗೆ ಅನುಕೂಲ ಮಾಡಿಕೊಡಲು ಹಸು ಸಾಕಾಣಿಕೆಗೆ ಸಹಾಯಧನ, ಅಡುಗೆ ಅನಿಲ ಸಿಲಿಂಡರ್ ವಿತರಣಾ ಕಾರ್ಯಕ್ರಮ ನಡೆಯಲಿದೆ. ₹ 16 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.</p>.<p>ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದ ಡಿ.ಕೆ. ಸುರೇಶ್, ವಿಧಾನ ಪರಿಷತ್ ಸದಸ್ಯರಾದ ಗೋಪಿನಾಥ ರೆಡ್ಡಿ, ಪುಟ್ಟಣ್ಣ, ಅ. ದೇವೇಗೌಡ, ಪಿ.ಆರ್. ರಮೇಶ್ ಪಾಲ್ಗೊಳ್ಳಲಿದ್ದಾರೆ ಎಂದರು.</p>.<p>ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಚ್.ಜೆ. ಪ್ರಸನ್ನಕುಮಾರ್ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯಲ್ಲಿ ಶಿಕ್ಷಣ, ಮಹಿಳಾ ಸಬಲೀಕರಣ, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ವಿವಿಧ ಯೋಜನೆಯಡಿ ನೆರವು ಸೇರಿದಂತೆ ವಿವಿಧ ಕಾರ್ಯಕ್ರಮ ರೂಪಿಸಲಾಗಿದೆ. ಪಂಚಾಯಿತಿಯ ಅಭಿವೃದ್ಧಿ ಕೈಪಿಡಿಯನ್ನು ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಗುವುದು ಎಂದರು.</p>.<p>ಗ್ರಾಮ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಸದಸ್ಯ ಕಿರಣ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಕಾಂತರಾಜು, ಅಶೋಕ್, ದೀಪ, ಮನು, ಶಿವರಾಜು, ಲೋಕನಾಥ್, ಮಾಜಿ ಸದಸ್ಯ ಆರ್.ಎಸ್. ಪ್ರಕಾಶ್, ಮಂಜು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿದ್ದರಾಜು, ಕಾರ್ಯದರ್ಶಿ ತೇಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>