ರಥೋತ್ಸವದ ಅಂಗವಾಗಿ ನವಗ್ರಹ ಪೂಜೆ, ಗಣಹೋಮ, ರಕ್ಷರಾಮ ತಾರಕ ಹೋಮ, ಆಂಜನೇಯ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲಾಯಿತು. ಬೆಳಿಗ್ಗೆ 11ರ ವೇಳೆಗೆ ಅಲಂಕೃತ ರಥದಲ್ಲಿ ವೀರ ಆಂಜನೇಯ ಸ್ವಾಮಿ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ನೆರೆದಿದ್ದ ಭಕ್ತರು ಜೈ ಶ್ರೀರಾಮ್ ಜೈ ಆಂಜನೇಯ ಘೋಷಣೆಗಳನ್ನು ಕೂಗಿ, ದವನ ಚುಚ್ಚಿದ ಬಾಳೆಹಣ್ಣನ್ನು ರಥಕ್ಕೆ ಎಸೆಯುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು. ಅಲಂಕೃತ
ರಥವು ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.