<p><strong>ದೊಡ್ಡಬಳ್ಳಾಪುರ:</strong> ಪೊಲೀಸ್ ವೃತ್ತಿಯಲ್ಲಿ ಉತ್ತಮಸೇವೆ ಸಲ್ಲಿಸಿದ ಹಿನ್ನೆಲೆ ಯಲ್ಲಿ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ ಪಡೆದ ಡಿವೈಎಸ್ಪಿ ಟಿ.ರಂಗಪ್ಪ ಹಾಗೂ ಮುಖ್ಯಮಂತ್ರಿ ಪದಕ ಪಡೆದ ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ಕುಮಾರ್ ಅವರಿಗೆ ಕನ್ನಡ ಸಂಘಟನೆಗಳ ಒಕ್ಕೂಟದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.</p>.<p>ಅಭಿನಂದನೆ ಸ್ವೀಕರಿಸಿ ಮಾತನಾಡಿ ಡಿವೈಎಸ್ಪಿ ಟಿ.ರಂಗಪ್ಪ, ಪೊಲೀಸರು ಮೋಟಾರು ವಾಹನ ಸಂಬಂಧಿತ ಪ್ರಕರಣಗಳಲ್ಲಿ ಸಾರ್ವಜನಿಕರನ್ನು ಪ್ರಶ್ನಿಸುವ ಮೊದಲು ತಮ್ಮ ವಾಹನಗಳಿಗೆ ಎಲ್ಲ ಅಗತ್ಯ ದಾಖಲೆ ಹೊಂದಿರಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಸಿಬ್ಬಂದಿ ಚಾಲನಾ ಪರವಾನಗಿ, ವಾಹನ ವಿಮೆ ಸೇರಿದಂತೆ ಎಲ್ಲ ದಾಖಲೆಗಳನ್ನು ಕಡ್ಡಾಯವಾಗಿ ಹೊಂದುವಂತೆ ಸೂಚನೆ ನೀಡ<br />ಲಾಗಿದೆ. ಸಾರ್ವಜನಿಕರು ಯಾವುದೇ ಕಾರಣಕ್ಕೂ ರಸ್ತೆ ಸುರಕ್ಷತೆ ಕಾನೂನು ಉಲ್ಲಂಘಿಸದೆ ಪೊಲೀಸರೊಂದಿಗೆ ಸಹಕರಿಸಬೇಕು ಎಂದರು.</p>.<p>ಪೊಲೀಸರನ್ನು ಸಾರ್ವಜನಿಕರು ಅಭಿನಂದಿಸುವುದು ಅಪರೂಪ. ಆದರೆ, ಇಲ್ಲಿನ ಸಂಘಟನೆ ಹಾಗೂ ಜನರು ಅಭಿನಂದಿಸಿರುವುದು<br />ಸಂತಸದ ವಿಚಾರ. ಆದರೆ, ಇದೇ ವಿಶ್ವಾಸವನ್ನು ದುರುಪಯೋಗಪಡಿಸಿಕೊಳ್ಳಬಾರದು. ‘ನನ್ನ ಪ್ರಶಸ್ತಿಯನ್ನು ಇಲ್ಲಿನ ಕನ್ನಡಪರ ಸಂಘನೆಗಳಿಗೆ ಅರ್ಪಿಸುತ್ತೇನೆ’ ಎಂದು ಅವರು ಹೇಳಿದರು.</p>.<p>ಸಾರ್ವಜನಿಕ ಸೇವೆಯಲ್ಲಿ ವೃತ್ತಿನಿಷ್ಠೆಗೆ ಮನ್ನಣೆ ಸಿಗುತ್ತದೆ. ಸಾಧನೆ ಎಂಬುದು ಹಲವರಿಗೆ ಸ್ಫೂರ್ತಿಯಾದಾಗ ಮಾತ್ರ ಹೆಚ್ಚಿನ ಅರ್ಥ ಸಿಗುತ್ತದೆ ಎಂದು ಹೇಳಿದರು</p>.<p>ಯುವಜನರು ಸಾಮಾಜಿಕ ಪ್ರಗತಿಗೆ ಪೂರಕವಾದ ವ್ಯಕ್ತಿತ್ವಗಳಾಗಿ ರೂಪಗೊಂಡಾಗ ಮಾತ್ರ ಬದುಕಿನ ಸಾರ್ಥಕತೆ ಲಭ್ಯವಾಗುತ್ತದೆ ಎಂದರು.</p>.<p>ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ಕುಮಾರ್ ಮಾತನಾಡಿ, ರಂಗಪ್ಪ ಅವರಂತಹ ಉತ್ತಮ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕೆಲಸ ಮಾಡುವ ಅವಕಾಶ ದೊರೆತಿರುವುದು ವೃತ್ತಿ ಬದುಕಿನಲ್ಲಿ ಅನನ್ಯ ಸಾಧನೆಗೆ ದಾರಿ ದೀಪವಾಗಿದೆ ಎಂದರು.</p>.<p>ಕನ್ನಡ ಸಂಘಟನೆಗಳ ಒಕ್ಕೂಟದ ಹಲವು ಸಂಘಟನೆಗಳಿಂದ ಅಭಿನಂದಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong> ಪೊಲೀಸ್ ವೃತ್ತಿಯಲ್ಲಿ ಉತ್ತಮಸೇವೆ ಸಲ್ಲಿಸಿದ ಹಿನ್ನೆಲೆ ಯಲ್ಲಿ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ ಪಡೆದ ಡಿವೈಎಸ್ಪಿ ಟಿ.ರಂಗಪ್ಪ ಹಾಗೂ ಮುಖ್ಯಮಂತ್ರಿ ಪದಕ ಪಡೆದ ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ಕುಮಾರ್ ಅವರಿಗೆ ಕನ್ನಡ ಸಂಘಟನೆಗಳ ಒಕ್ಕೂಟದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.</p>.<p>ಅಭಿನಂದನೆ ಸ್ವೀಕರಿಸಿ ಮಾತನಾಡಿ ಡಿವೈಎಸ್ಪಿ ಟಿ.ರಂಗಪ್ಪ, ಪೊಲೀಸರು ಮೋಟಾರು ವಾಹನ ಸಂಬಂಧಿತ ಪ್ರಕರಣಗಳಲ್ಲಿ ಸಾರ್ವಜನಿಕರನ್ನು ಪ್ರಶ್ನಿಸುವ ಮೊದಲು ತಮ್ಮ ವಾಹನಗಳಿಗೆ ಎಲ್ಲ ಅಗತ್ಯ ದಾಖಲೆ ಹೊಂದಿರಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಸಿಬ್ಬಂದಿ ಚಾಲನಾ ಪರವಾನಗಿ, ವಾಹನ ವಿಮೆ ಸೇರಿದಂತೆ ಎಲ್ಲ ದಾಖಲೆಗಳನ್ನು ಕಡ್ಡಾಯವಾಗಿ ಹೊಂದುವಂತೆ ಸೂಚನೆ ನೀಡ<br />ಲಾಗಿದೆ. ಸಾರ್ವಜನಿಕರು ಯಾವುದೇ ಕಾರಣಕ್ಕೂ ರಸ್ತೆ ಸುರಕ್ಷತೆ ಕಾನೂನು ಉಲ್ಲಂಘಿಸದೆ ಪೊಲೀಸರೊಂದಿಗೆ ಸಹಕರಿಸಬೇಕು ಎಂದರು.</p>.<p>ಪೊಲೀಸರನ್ನು ಸಾರ್ವಜನಿಕರು ಅಭಿನಂದಿಸುವುದು ಅಪರೂಪ. ಆದರೆ, ಇಲ್ಲಿನ ಸಂಘಟನೆ ಹಾಗೂ ಜನರು ಅಭಿನಂದಿಸಿರುವುದು<br />ಸಂತಸದ ವಿಚಾರ. ಆದರೆ, ಇದೇ ವಿಶ್ವಾಸವನ್ನು ದುರುಪಯೋಗಪಡಿಸಿಕೊಳ್ಳಬಾರದು. ‘ನನ್ನ ಪ್ರಶಸ್ತಿಯನ್ನು ಇಲ್ಲಿನ ಕನ್ನಡಪರ ಸಂಘನೆಗಳಿಗೆ ಅರ್ಪಿಸುತ್ತೇನೆ’ ಎಂದು ಅವರು ಹೇಳಿದರು.</p>.<p>ಸಾರ್ವಜನಿಕ ಸೇವೆಯಲ್ಲಿ ವೃತ್ತಿನಿಷ್ಠೆಗೆ ಮನ್ನಣೆ ಸಿಗುತ್ತದೆ. ಸಾಧನೆ ಎಂಬುದು ಹಲವರಿಗೆ ಸ್ಫೂರ್ತಿಯಾದಾಗ ಮಾತ್ರ ಹೆಚ್ಚಿನ ಅರ್ಥ ಸಿಗುತ್ತದೆ ಎಂದು ಹೇಳಿದರು</p>.<p>ಯುವಜನರು ಸಾಮಾಜಿಕ ಪ್ರಗತಿಗೆ ಪೂರಕವಾದ ವ್ಯಕ್ತಿತ್ವಗಳಾಗಿ ರೂಪಗೊಂಡಾಗ ಮಾತ್ರ ಬದುಕಿನ ಸಾರ್ಥಕತೆ ಲಭ್ಯವಾಗುತ್ತದೆ ಎಂದರು.</p>.<p>ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ಕುಮಾರ್ ಮಾತನಾಡಿ, ರಂಗಪ್ಪ ಅವರಂತಹ ಉತ್ತಮ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕೆಲಸ ಮಾಡುವ ಅವಕಾಶ ದೊರೆತಿರುವುದು ವೃತ್ತಿ ಬದುಕಿನಲ್ಲಿ ಅನನ್ಯ ಸಾಧನೆಗೆ ದಾರಿ ದೀಪವಾಗಿದೆ ಎಂದರು.</p>.<p>ಕನ್ನಡ ಸಂಘಟನೆಗಳ ಒಕ್ಕೂಟದ ಹಲವು ಸಂಘಟನೆಗಳಿಂದ ಅಭಿನಂದಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>