ಅಭಿನಂದನೆ ಸ್ವೀಕರಿಸಿ ಮಾತನಾಡಿ ಡಿವೈಎಸ್ಪಿ ಟಿ.ರಂಗಪ್ಪ, ಪೊಲೀಸರು ಮೋಟಾರು ವಾಹನ ಸಂಬಂಧಿತ ಪ್ರಕರಣಗಳಲ್ಲಿ ಸಾರ್ವಜನಿಕರನ್ನು ಪ್ರಶ್ನಿಸುವ ಮೊದಲು ತಮ್ಮ ವಾಹನಗಳಿಗೆ ಎಲ್ಲ ಅಗತ್ಯ ದಾಖಲೆ ಹೊಂದಿರಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಸಿಬ್ಬಂದಿ ಚಾಲನಾ ಪರವಾನಗಿ, ವಾಹನ ವಿಮೆ ಸೇರಿದಂತೆ ಎಲ್ಲ ದಾಖಲೆಗಳನ್ನು ಕಡ್ಡಾಯವಾಗಿ ಹೊಂದುವಂತೆ ಸೂಚನೆ ನೀಡ
ಲಾಗಿದೆ. ಸಾರ್ವಜನಿಕರು ಯಾವುದೇ ಕಾರಣಕ್ಕೂ ರಸ್ತೆ ಸುರಕ್ಷತೆ ಕಾನೂನು ಉಲ್ಲಂಘಿಸದೆ ಪೊಲೀಸರೊಂದಿಗೆ ಸಹಕರಿಸಬೇಕು ಎಂದರು.