ಮಂಡಿಬೆಲೆ ಗ್ರಾ.ಪಂ. ವ್ಯಾಪ್ತಿಯ ಚಿಕ್ಕತತ್ತಮಂಗಲದ ಮಂಜುನಾಥ್ ಮತ್ತು ಅವರ ಸಹೋದರಿ ನಡುವೆ ಹಣಕಾಸಿನ ವಿಚಾರವಾಗಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಂಜುನಾಥ್ ಅವರನ್ನು ವಿಚಾರಣೆಗಾಗಿ ಠಾಣೆಗೆ ಕರೆದುಕೊಂಡು ಬಂದು ಸೆಲ್ನಲ್ಲಿ ಕೂರಿಸಿದ್ದರು. ಠಾಣೆಯಿಂದ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಠಾಣೆಯ ಸಬ್ ಇನ್ಸ್ಪೆಕ್ಟರ್ ಈರಮ್ಮ ಅವರು, ಕಾನ್ಸ್ಟೆಬಲ್ ಮೂಲಕ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಪ್ರಕರಣ ಎದುರಿಸುತ್ತಿರುವ ಮಂಜುನಾಥ್, ಲೋಕಾಯುಕ್ತದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವಿಭಾಗಕ್ಕೆ ದೂರು ನೀಡಿದ್ದರು.ದೂರುದಾರರಿಂದ ಮೊದಲ ಕಂತಿನಲ್ಲಿ ₹ 30 ಸಾವಿರ ಲಂಚ ಪಡೆಯುತ್ತಿದ್ದಾಗ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಚಂದ್ರಶೇಖರ್ ಅವರನ್ನು ಬಂಧಿಸಿದರು.ಈರಮ್ಮ ಅವರನ್ನೂ ವಶಕ್ಕೆ ಪಡೆದಿರುವ ತನಿಖಾ ತಂಡ, ಅವರ ಪಾತ್ರದ ಕುರಿತು ವಿಚಾರಣೆ ನಡೆಸುತ್ತಿದೆ.