ವಿಜಯಪುರ ಮತ್ತು ದೇವನಹಳ್ಳಿ ಪುರಸಭೆಗಳನ್ನು ಅವಳಿ ನಗರ ಸಭೆ ಮಾಡಬೇಕೆಂದು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಉಸ್ತುವಾರಿ ಸಚಿವ ಆರ್.ಆಶೋಕ್ ಅವರಿಗೂ ಮನವಿ ಮಾಡಲಾಗಿದೆ. ತಾಲ್ಲೂಕು ಕೇಂದ್ರಕ್ಕೆ ಶಿಫಾರಸು ಮಾಡಬೇಕಾದರೆ ವಿಜಯಪುರ ಸಭೆ ಸದಸ್ಯರು, ವಿಜಯಪುರ ಮತ್ತು ಚನ್ನರಾಯಪಟ್ಟ ಹೋಬಳಿ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಸದಸ್ಯರು, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ ವಿವಿಧ ಸಹಕಾರ ಸಂಘಗಳ ಅಧ್ಯಕ್ಷರು, ವಿವಿಧ ಪಕ್ಷಗಳ ಮುಖಂಡರು ಪಕ್ಷಾತೀತವಾಗಿ ಬಹಿರಂಗ ಸಭೆ ನಡೆಸಿ ಒಮ್ಮತದ ನಿರ್ಣಯ ಕೈಗೊಳ್ಳಬೇಕು. ಆದರೆ. ಏಕಾಏಕಿ ಶಾಸಕರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸುವುದರಲ್ಲಿ ಅರ್ಥವಿಲ್ಲ ಎಂದರು.