<p><strong>ವಿಜಯಪುರ (ದೇವನಹಳ್ಳಿ): ಭಾನುವಾರ ಸಂಜೆ ಪಟ್ಟಣದ ಮಂಡಿಬೆಲೆ ಸರ್ಕಲ್ ಬಳಿ </strong>ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಮತ್ತೊಬ್ಬ ಯುವಕ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿದ್ದಾನೆ. ಚಾಕುವಿನಿಂದ ಇರಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಮಂಡಿಬೆಲೆ ರಸ್ತೆಯ 9ನೇ ವಾರ್ಡ್ ನಿವಾಸಿ ಶಹಬಾಜ್ ಬಿನ್ ಶಫಿ (21) ಇರಿತಕ್ಕೆ ಒಳಗಾದ ಯುವಕ. ಇದೇ ವಾರ್ಡ್ನ ನವೀನ್ (19) ಬಂಧಿತ.</p>.<p>ಮೊಬೈಲ್ ನೋಡುತ್ತಾ ಕುಳಿತಿದ್ದ ಶಹಬಾಜ್ ಬಳಿ ಬಂದ ನವೀನ್ ಏಕಾಏಕಿ ಚಾಕುವಿನಿಂದ ಎದೆಯ ಬಲ ಭಾಗಕ್ಕೆ ಇರಿದಿದ್ದಾನೆ. ರಕ್ತಸ್ರಾವಕ್ಕೊಳಗಾದ ಯುವಕನನ್ನು ಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.</p>.<p>ಯುವಕನ ಮೇಲೆ ನಡೆದಿರುವ ಚಾಕು ಇರಿತದ ವಿಡಿಯೊ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.</p>.<p>ಸ್ಥಳಕ್ಕೆ ದೊಡ್ಡಬಳ್ಳಾಪುರ ಉಪವಿಭಾಗ ಡಿವೈಎಸ್ಪಿ ಪಾಡುರಂಗ, ಆರಕ್ಷಕ ನಿರೀಕ್ಷಕ ಪ್ರಶಾಂತ್ ಎಸ್ ನಾಯಕ್, ಪಿಎಸ್ಐ ಸಾಧಿಕ್ ಪಾಷಾ, ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆರೋಪಿ ನವೀನ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿ ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ದೇವನಹಳ್ಳಿ): ಭಾನುವಾರ ಸಂಜೆ ಪಟ್ಟಣದ ಮಂಡಿಬೆಲೆ ಸರ್ಕಲ್ ಬಳಿ </strong>ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಮತ್ತೊಬ್ಬ ಯುವಕ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿದ್ದಾನೆ. ಚಾಕುವಿನಿಂದ ಇರಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಮಂಡಿಬೆಲೆ ರಸ್ತೆಯ 9ನೇ ವಾರ್ಡ್ ನಿವಾಸಿ ಶಹಬಾಜ್ ಬಿನ್ ಶಫಿ (21) ಇರಿತಕ್ಕೆ ಒಳಗಾದ ಯುವಕ. ಇದೇ ವಾರ್ಡ್ನ ನವೀನ್ (19) ಬಂಧಿತ.</p>.<p>ಮೊಬೈಲ್ ನೋಡುತ್ತಾ ಕುಳಿತಿದ್ದ ಶಹಬಾಜ್ ಬಳಿ ಬಂದ ನವೀನ್ ಏಕಾಏಕಿ ಚಾಕುವಿನಿಂದ ಎದೆಯ ಬಲ ಭಾಗಕ್ಕೆ ಇರಿದಿದ್ದಾನೆ. ರಕ್ತಸ್ರಾವಕ್ಕೊಳಗಾದ ಯುವಕನನ್ನು ಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.</p>.<p>ಯುವಕನ ಮೇಲೆ ನಡೆದಿರುವ ಚಾಕು ಇರಿತದ ವಿಡಿಯೊ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.</p>.<p>ಸ್ಥಳಕ್ಕೆ ದೊಡ್ಡಬಳ್ಳಾಪುರ ಉಪವಿಭಾಗ ಡಿವೈಎಸ್ಪಿ ಪಾಡುರಂಗ, ಆರಕ್ಷಕ ನಿರೀಕ್ಷಕ ಪ್ರಶಾಂತ್ ಎಸ್ ನಾಯಕ್, ಪಿಎಸ್ಐ ಸಾಧಿಕ್ ಪಾಷಾ, ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆರೋಪಿ ನವೀನ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿ ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>