<p>ವಿಜಯಪುರ (ದೇವನಹಳ್ಳಿ): ಇಲ್ಲಿನ ಬಸ್ ನಿಲ್ದಾಣದ ಆವರಣದಲ್ಲಿ</p>.<p>ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.</p>.<p>ಅಂಬೇಡ್ಕರ್ ರಚಿಸಿದ ಸಂವಿಧಾನ ಭಾರತವನ್ನು ವಿಶ್ವದ ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವನ್ನಾಗಿ ಮಾಡಿದೆ. ಶೋಷಿತ ವರ್ಗದ ಧ್ವನಿಯಾಗಿದ್ದ ಅವರು ಸಮಾಜಕ್ಕೆ ನೀಡಿದ ‘ಶಿಕ್ಷಣ, ಸಂಘಟನೆ, ಹೋರಾಟ’ ಎಂಬ ಮಂತ್ರ ಇಂದಿನ ಯುವ ಪೀಳಿಗೆಗೆ ಸದಾ ಸ್ಫೂರ್ತಿದಾಯಕವಾಗಿದೆ ಎಂದು ಕಾಂಗ್ರೆಸ್ ಮುಖಂಡ ಭಾನುಚಂದ್ರ ತಿಳಿಸಿದರು.</p>.<p>ಪುರಸಭೆ ಅಧ್ಯಕ್ಷೆ ಭವ್ಯ ಮಹೇಶ್ ಮಾತನಾಡಿ, ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಾಭಿಮಾನದಿಂದ ಬದುಕಲು ಅವರ ಹೋರಾಟವೇ ಮೂಲ ಕಾರಣ. ಅವರ ಸಮಾನತೆ ಸಿದ್ಧಾಂತ ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಸದೃಢ ಸಮಾಜದ ನಿರ್ಮಾಣ ಸಾಧ್ಯ ಎಂದರು.</p>.<p>ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ನಂದಕುಮಾರ್, ಕೆ.ಎಂ.ಮಧು, ಸೈಫುಲ್ಲ, ರಾಘವ, ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-15-2051865367</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ (ದೇವನಹಳ್ಳಿ): ಇಲ್ಲಿನ ಬಸ್ ನಿಲ್ದಾಣದ ಆವರಣದಲ್ಲಿ</p>.<p>ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.</p>.<p>ಅಂಬೇಡ್ಕರ್ ರಚಿಸಿದ ಸಂವಿಧಾನ ಭಾರತವನ್ನು ವಿಶ್ವದ ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವನ್ನಾಗಿ ಮಾಡಿದೆ. ಶೋಷಿತ ವರ್ಗದ ಧ್ವನಿಯಾಗಿದ್ದ ಅವರು ಸಮಾಜಕ್ಕೆ ನೀಡಿದ ‘ಶಿಕ್ಷಣ, ಸಂಘಟನೆ, ಹೋರಾಟ’ ಎಂಬ ಮಂತ್ರ ಇಂದಿನ ಯುವ ಪೀಳಿಗೆಗೆ ಸದಾ ಸ್ಫೂರ್ತಿದಾಯಕವಾಗಿದೆ ಎಂದು ಕಾಂಗ್ರೆಸ್ ಮುಖಂಡ ಭಾನುಚಂದ್ರ ತಿಳಿಸಿದರು.</p>.<p>ಪುರಸಭೆ ಅಧ್ಯಕ್ಷೆ ಭವ್ಯ ಮಹೇಶ್ ಮಾತನಾಡಿ, ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಾಭಿಮಾನದಿಂದ ಬದುಕಲು ಅವರ ಹೋರಾಟವೇ ಮೂಲ ಕಾರಣ. ಅವರ ಸಮಾನತೆ ಸಿದ್ಧಾಂತ ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಸದೃಢ ಸಮಾಜದ ನಿರ್ಮಾಣ ಸಾಧ್ಯ ಎಂದರು.</p>.<p>ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ನಂದಕುಮಾರ್, ಕೆ.ಎಂ.ಮಧು, ಸೈಫುಲ್ಲ, ರಾಘವ, ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-15-2051865367</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>