<p><strong>ವಿಜಯಪುರ(ದೇವನಹಳ್ಳಿ): ಇ</strong>ಲ್ಲಿಯ ಚನ್ನಕೇಶವ ದೇವಾಲಯ ಆವರಣದಲ್ಲಿ ಈಚೆಗೆ ಸಾಮೂಹಿಕ ಶಿವ ಪಂಚಾಕ್ಷರಿ ಮಂತ್ರ ಪಠಣೆ ಕಾರ್ಯಕ್ರಮ ನಡೆಯಿತು.</p>.<p>ಧರ್ಮಸ್ಥಳದಲ್ಲಿ ಶ್ರದ್ಧೆ ಭಕ್ತಿ ಬೆಳಗಿ, ಶಾಂತಿ ನೆಲಸಲಿ ಎಂಬ ಸಂಕಲ್ಪದೊಂದಿಗೆ ರಾಜ್ಯದಾದ್ಯಂತ ಒಂದು ವಾರ ಸಾಮೂಹಿಕ ಶಿವಪಂಚಾಕ್ಷರಿ ಜಪ ಪಠಣ ಮಾಡಲು ತಾಲೂಕು ವಿಶ್ವ ಹಿಂದೂ ಪರಿಷದ್, ಬಜರಂಗದಳ, ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದವು. </p>.<p>ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಮಾಡುತ್ತಿರುವವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಸಂಗಮೇಶ್ವರ ಧರ್ಮಸಂಸ್ಥೆಯ ಅಧ್ಯಕ್ಷ ಎಂ.ಚಂದ್ರಕಾಂತ್ ಕುಮಾರ್ ಒತ್ತಾಯಿಸಿದರು. <br />ಧರ್ಮಸ್ಥಳ ಪವಿತ್ರ ಶ್ರದ್ಧಾಕೇಂದ್ರ. ಇಂತಹ ಕ್ಷೇತ್ರದಲ್ಲಿ ಧರ್ಮ ವಿರೋಧಿ ಕೆಲಸಗಳಾಗುತ್ತಿರುವುದು ಹಿಂದೂಗಳಿಗೆ ಮಾಡುತ್ತಿರುವ ಅವಮಾನ ಎಂದು ಬಜರಂಗದಳ ಜಿಲ್ಲಾ ಸಂಯೋಜಕ ಕೃಷ್ಣಮೂರ್ತಿ ಹೇಳಿದರು.<br /><br /> ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಸಂಚಾಲಕ ರಘು ಮಾತನಾಡಿದರು. ಮಹಂತಿನ ಮಠ ಧರ್ಮ ಸಂಸ್ಥೆಯ ಖಜಾಂಚಿ ಎ.ಮಧು, ರವಿ, ಮಣಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ(ದೇವನಹಳ್ಳಿ): ಇ</strong>ಲ್ಲಿಯ ಚನ್ನಕೇಶವ ದೇವಾಲಯ ಆವರಣದಲ್ಲಿ ಈಚೆಗೆ ಸಾಮೂಹಿಕ ಶಿವ ಪಂಚಾಕ್ಷರಿ ಮಂತ್ರ ಪಠಣೆ ಕಾರ್ಯಕ್ರಮ ನಡೆಯಿತು.</p>.<p>ಧರ್ಮಸ್ಥಳದಲ್ಲಿ ಶ್ರದ್ಧೆ ಭಕ್ತಿ ಬೆಳಗಿ, ಶಾಂತಿ ನೆಲಸಲಿ ಎಂಬ ಸಂಕಲ್ಪದೊಂದಿಗೆ ರಾಜ್ಯದಾದ್ಯಂತ ಒಂದು ವಾರ ಸಾಮೂಹಿಕ ಶಿವಪಂಚಾಕ್ಷರಿ ಜಪ ಪಠಣ ಮಾಡಲು ತಾಲೂಕು ವಿಶ್ವ ಹಿಂದೂ ಪರಿಷದ್, ಬಜರಂಗದಳ, ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದವು. </p>.<p>ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಮಾಡುತ್ತಿರುವವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಸಂಗಮೇಶ್ವರ ಧರ್ಮಸಂಸ್ಥೆಯ ಅಧ್ಯಕ್ಷ ಎಂ.ಚಂದ್ರಕಾಂತ್ ಕುಮಾರ್ ಒತ್ತಾಯಿಸಿದರು. <br />ಧರ್ಮಸ್ಥಳ ಪವಿತ್ರ ಶ್ರದ್ಧಾಕೇಂದ್ರ. ಇಂತಹ ಕ್ಷೇತ್ರದಲ್ಲಿ ಧರ್ಮ ವಿರೋಧಿ ಕೆಲಸಗಳಾಗುತ್ತಿರುವುದು ಹಿಂದೂಗಳಿಗೆ ಮಾಡುತ್ತಿರುವ ಅವಮಾನ ಎಂದು ಬಜರಂಗದಳ ಜಿಲ್ಲಾ ಸಂಯೋಜಕ ಕೃಷ್ಣಮೂರ್ತಿ ಹೇಳಿದರು.<br /><br /> ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಸಂಚಾಲಕ ರಘು ಮಾತನಾಡಿದರು. ಮಹಂತಿನ ಮಠ ಧರ್ಮ ಸಂಸ್ಥೆಯ ಖಜಾಂಚಿ ಎ.ಮಧು, ರವಿ, ಮಣಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>