<p><strong>ವಿಜಯಪುರ (ದೇವನಹಳ್ಳಿ): </strong>ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟನೆ ಉಂಟಾಗಿರುವುದರಿಂದ ವ್ಯಾಪಕ ಧೂಳಿನಿಂದ ಸವಾರರು ತೊಂದರೆ ಅನುಭವಿಸುವಂತಾಗಿದೆ.</p>.<p>ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಹೊಸಕೋಟೆ, ಶಿಡ್ಲಘಟ್ಟ, ತಿರುಪತಿ ಸೇರಿದಂತೆ ವಿವಿಧೆಡೆಗೆ ಪಟ್ಟಣದ ಮುಖ್ಯರಸ್ತೆಯ ಮೂಲಕವೇ ಹಾದು ಹೋಗುವುದರಿಂದ ವಾಹನ ದಟ್ಟಣೆ ಹೆಚ್ಚಳಗೊಂಡಿದೆ.</p>.<p>ಬಸ್, ಲಾರಿ ಇನ್ನೀತರ ದೊಡ್ಡ ವಾಹನಗಳು ಸಂಚರಿಸಿದರೆ ಹಿಂದೆಯೇ ಬರುವ ಧೂಳು ಹಿಂಬದಿ ಸವಾರರ ಕಣ್ಣಿಗೆ ಬೀಳುತ್ತಿದ್ದು, ದ್ವಿಚಕ್ರ ವಾಹನ ಸವಾರರು ಧೂಳಿನ ಭೀತಿ ಎದುರಿಸುವಂತಾಗಿದೆ.</p>.<p>ರಸ್ತೆ ಪಕ್ಕದ ಮಳಿಗೆ ವ್ಯಾಪಾರಸ್ಥರು ಧೂಳಿನಿಂದ ಬೇಸತ್ತು ಹೋಗಿದ್ದು, ಆಳಲನ್ನು ಯಾರಿಗೆ ಹೇಳಬೇಕು ಎನ್ನುವುದು ತೋಚದೆ ಅನೇಕ ಸಮಸ್ಯೆಗಳ ನಡುವೆ ಅನಿವಾರ್ಯವಾಗಿ ಕಾಲ ಕಳೆಯುವಂತಾಗಿದೆ. ಧೂಳು ನಿಯಂತ್ರಿಸಲು ಬೆಳಿಗ್ಗೆ ಸಂಜೆ ಸಮಯದಲ್ಲಿ ರಸ್ತೆಗೆ ನೀರು ಹಾಯಿಸಲು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<p>ಪಟ್ಟಣದಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಯಿಂದಾಗಿ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿರುವುದರಿಂದ ಅಪಘಾತಗಳಿಗೆ ಎಡೆ ಮಾಡಿಕೊಟ್ಟಿದೆ. ವಾಹನ ದಟ್ಟಣೆಯಿಂದ ವಾಹನ ಸವಾರರು, ಪಾದಾಚಾರಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಗಾಂಧಿಚೌಕ, ಹಳೆ ಪುರಸಭಾ ಮುಂಭಾಗ, ವೆಂಕಟರಮಣಸ್ವಾಮಿ ದೇವಾಲಯ ರಸ್ತೆ, ಬಸ್ ನಿಲ್ದಾಣ, ಬಜಾರ್ ರಸ್ತೆ ಸೇರಿದಂತೆ ಅನೇಕ ಕಡೆಗಳಲ್ಲಿ ವಾಹನ ಸವಾರರು ಅಡ್ಡಾದಿಡ್ಡಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸಂಚಾರಕ್ಕೆ, ಪಾದಾಚಾರಿಗಳ ಓಡಾಟಕ್ಕೆ ತೊಂದರೆ ಉಂಟಾಗಿದೆ.</p>.<p>ಎಲ್ಲೆಂದರಲ್ಲಿ ಅಡ್ಡಾದಿಡ್ಡಿ ವಾಹನಗಳನ್ನು ನಿಲುಗಡೆ ಕಡಿವಾಣ ಹಾಕಲು ಪೊಲೀಸರು ಕ್ರಮ ಕೈಗೊಳ್ಳಬೇಕು. ಶಾಲಾ-ಕಾಲೇಜು ಆರಂಭ ಹಾಗೂ ಬಿಡುವಿನ ವೇಳೆ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು. ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<p> <strong>ಅನಾರೋಗ್ಯದ ಭೀತಿ</strong> </p><p>ರಸ್ತೆ ಧೂಳಿನಿಂದ ಹದಗೆಡುತ್ತಿರುವ ವಾಯುಮಾಲಿನ್ಯದಿಂದ ಸಾರ್ವಜನಿಕರಿಗೆ ಅನಾರೋಗ್ಯದ ಭೀತಿ ಶುರುವಾಗಿದೆ. ಧೂಳಿನಿಂದ ಕೆಮ್ಮು ಕಣ್ಣು ಉರಿ ಅಸ್ತಮಾ ಉಸಿರಾಟ ಚರ್ಮರೋಗ ಶ್ವಾಸಕೋಶ ತೊಂದರೆಗೆ ಒಳಗಾಗುವಂತಾಗಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ದೇವನಹಳ್ಳಿ): </strong>ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟನೆ ಉಂಟಾಗಿರುವುದರಿಂದ ವ್ಯಾಪಕ ಧೂಳಿನಿಂದ ಸವಾರರು ತೊಂದರೆ ಅನುಭವಿಸುವಂತಾಗಿದೆ.</p>.<p>ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಹೊಸಕೋಟೆ, ಶಿಡ್ಲಘಟ್ಟ, ತಿರುಪತಿ ಸೇರಿದಂತೆ ವಿವಿಧೆಡೆಗೆ ಪಟ್ಟಣದ ಮುಖ್ಯರಸ್ತೆಯ ಮೂಲಕವೇ ಹಾದು ಹೋಗುವುದರಿಂದ ವಾಹನ ದಟ್ಟಣೆ ಹೆಚ್ಚಳಗೊಂಡಿದೆ.</p>.<p>ಬಸ್, ಲಾರಿ ಇನ್ನೀತರ ದೊಡ್ಡ ವಾಹನಗಳು ಸಂಚರಿಸಿದರೆ ಹಿಂದೆಯೇ ಬರುವ ಧೂಳು ಹಿಂಬದಿ ಸವಾರರ ಕಣ್ಣಿಗೆ ಬೀಳುತ್ತಿದ್ದು, ದ್ವಿಚಕ್ರ ವಾಹನ ಸವಾರರು ಧೂಳಿನ ಭೀತಿ ಎದುರಿಸುವಂತಾಗಿದೆ.</p>.<p>ರಸ್ತೆ ಪಕ್ಕದ ಮಳಿಗೆ ವ್ಯಾಪಾರಸ್ಥರು ಧೂಳಿನಿಂದ ಬೇಸತ್ತು ಹೋಗಿದ್ದು, ಆಳಲನ್ನು ಯಾರಿಗೆ ಹೇಳಬೇಕು ಎನ್ನುವುದು ತೋಚದೆ ಅನೇಕ ಸಮಸ್ಯೆಗಳ ನಡುವೆ ಅನಿವಾರ್ಯವಾಗಿ ಕಾಲ ಕಳೆಯುವಂತಾಗಿದೆ. ಧೂಳು ನಿಯಂತ್ರಿಸಲು ಬೆಳಿಗ್ಗೆ ಸಂಜೆ ಸಮಯದಲ್ಲಿ ರಸ್ತೆಗೆ ನೀರು ಹಾಯಿಸಲು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<p>ಪಟ್ಟಣದಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಯಿಂದಾಗಿ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿರುವುದರಿಂದ ಅಪಘಾತಗಳಿಗೆ ಎಡೆ ಮಾಡಿಕೊಟ್ಟಿದೆ. ವಾಹನ ದಟ್ಟಣೆಯಿಂದ ವಾಹನ ಸವಾರರು, ಪಾದಾಚಾರಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಗಾಂಧಿಚೌಕ, ಹಳೆ ಪುರಸಭಾ ಮುಂಭಾಗ, ವೆಂಕಟರಮಣಸ್ವಾಮಿ ದೇವಾಲಯ ರಸ್ತೆ, ಬಸ್ ನಿಲ್ದಾಣ, ಬಜಾರ್ ರಸ್ತೆ ಸೇರಿದಂತೆ ಅನೇಕ ಕಡೆಗಳಲ್ಲಿ ವಾಹನ ಸವಾರರು ಅಡ್ಡಾದಿಡ್ಡಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸಂಚಾರಕ್ಕೆ, ಪಾದಾಚಾರಿಗಳ ಓಡಾಟಕ್ಕೆ ತೊಂದರೆ ಉಂಟಾಗಿದೆ.</p>.<p>ಎಲ್ಲೆಂದರಲ್ಲಿ ಅಡ್ಡಾದಿಡ್ಡಿ ವಾಹನಗಳನ್ನು ನಿಲುಗಡೆ ಕಡಿವಾಣ ಹಾಕಲು ಪೊಲೀಸರು ಕ್ರಮ ಕೈಗೊಳ್ಳಬೇಕು. ಶಾಲಾ-ಕಾಲೇಜು ಆರಂಭ ಹಾಗೂ ಬಿಡುವಿನ ವೇಳೆ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು. ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<p> <strong>ಅನಾರೋಗ್ಯದ ಭೀತಿ</strong> </p><p>ರಸ್ತೆ ಧೂಳಿನಿಂದ ಹದಗೆಡುತ್ತಿರುವ ವಾಯುಮಾಲಿನ್ಯದಿಂದ ಸಾರ್ವಜನಿಕರಿಗೆ ಅನಾರೋಗ್ಯದ ಭೀತಿ ಶುರುವಾಗಿದೆ. ಧೂಳಿನಿಂದ ಕೆಮ್ಮು ಕಣ್ಣು ಉರಿ ಅಸ್ತಮಾ ಉಸಿರಾಟ ಚರ್ಮರೋಗ ಶ್ವಾಸಕೋಶ ತೊಂದರೆಗೆ ಒಳಗಾಗುವಂತಾಗಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>