<p><strong>ವಿಜಯಪುರ (ದೇವನಹಳ್ಳಿ):</strong> ರಣಬಿಸಿಲಿಗೆ ಪಟ್ಟಣದ ಸಂತೆ ವ್ಯಾಪಾರದ ಮೇಲೆ ಹೊಡೆತ ಬಿದ್ದಿದೆ. ಇದರಿಂದ ರೈತರು ಮತ್ತು ಸಣ್ಣ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.</p>.<p>ಪ್ರಸ್ತುತ ಬಿಸಿಲಿನ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ನಷ್ಟಿದೆ. ಸದ್ಯ ಸುಡು ಬಿಸಿಲಿಗೆ ಪಟ್ಟಣದಲ್ಲಿ ನಡೆಯುವ ಶುಕ್ರವಾರ ಸಂತೆ ಬಿಕೋ ಎನ್ನಿಸುತ್ತಿದೆ. ಒಂದೆಡೆ ಬಿಸಿಲಿಗೆ ಹಸಿರು ಸೊಪ್ಪು, ತರಕಾರಿಗಳು ತಾಜಾತನ ಕಳೆದುಕೊಂಡರೆ, ಮತ್ತೊಂದೆಡೆ ಗ್ರಾಹಕರಿಲ್ಲದೆ ವ್ಯಾಪಾರ ವಹಿವಾಟು ಕುಸಿತ ಕಂಡಿದೆ.</p>.<p>ಸಂತೆಯಲ್ಲಿ ಸೊಪ್ಪು, ತರಕಾರಿ, ದಿನಸಿ, ಹಣ್ಣುಗಳನ್ನು ಮಾರಾಟ ಮಾಡುವ ಸಣ್ಣ ವ್ಯಾಪಾರಿಗಳು ಬಿಸಿಲಿನ ತಾಪಕ್ಕೆ ದೊಡ್ಡ ಛತ್ರಿಗಳ ಆಶ್ರಯದಲ್ಲಿ ಗ್ರಾಹಕರಿಗಾಗಿ ಕಾದು ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಬೆಳಿಗ್ಗೆಯಿಂದ ಸಂಜೆವರೆಗೂ ವ್ಯಾಪಾರ ನಡೆಸಿದರೂ ಹಾಕಿದ ಬಂಡವಾಳ ಬರುತ್ತಿಲ್ಲ ಎನ್ನುತ್ತಾರೆ ವ್ಯಾಪಾರಸ್ಥರು.</p>.<p>ಹಿಂದೆ ಸಂತೆಯಲ್ಲಿ ದಿನವೀಡಿ ವ್ಯಾಪಾರ ನಡೆಯುತ್ತಿತ್ತು. ಜನಜಂಗುಳಿ ಹೆಚ್ಚಾಗಿರುತ್ತಿತ್ತು. ಆದರೆ, ಈಗ ಬಿಸಿಲಿಗೆ ಹೆದರಿ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಸಂತೆಯ ಕಡೆ ಸುಳಿಯುತ್ತಿಲ್ಲ. ಸಣ್ಣ ವ್ಯಾಪಾರಿಗಳು ನಷ್ಟದ ಹಾದಿ ಹಿಡಿದಿದ್ದೇವೆ ಎಂದು ಸೊಪ್ಪಿನ ವ್ಯಾಪಾರಿ ಪುಷ್ಪ ತಿಳಿಸಿದರು.</p>.<p>ಪ್ರಸ್ತುತ ಬಿಸಿಲಿನ ತಾಪಮಾನ ವಿಪರೀತವಾಗಿದ್ದು, ವಾರದ ಸಂತೆಗೆ ಮೊದಲಿನಷ್ಟು ಗ್ರಾಹಕರು ಬರುತ್ತಿಲ್ಲ. ಬೆಳಿಗ್ಗೆ ಮತ್ತು ಸಂಜೆ ಮಾತ್ರ ಗ್ರಾಹಕರು ತರಕಾರಿಗಳನ್ನು ಖರೀದಿಸುತ್ತಿದ್ದಾರೆ. ಈಗ ಈರುಳ್ಳಿ, ಆಲೂಗಡ್ಡೆ ಸೇರಿದಂತೆ ಬಹುತೇಕ ತರಕಾರಿಗಳ ಬೆಲೆ ಕುಸಿದಿದೆ. ಬೆಳೆಗೆ ಹಾಕಿದ ಬಂಡವಾಳ ಕೈಗೆ ಬರುತ್ತಿಲ್ಲ, ನಷ್ಟ ಅನುಭವಿಸುವಂತಾಗಿದೆ ಎಂದು ರೈತ ನಾಗನಾಯಕನಹಳ್ಳಿಯ ಗ್ರಾಮದ ರೈತ ನಾಗರಾಜು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-15-1484981625</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ದೇವನಹಳ್ಳಿ):</strong> ರಣಬಿಸಿಲಿಗೆ ಪಟ್ಟಣದ ಸಂತೆ ವ್ಯಾಪಾರದ ಮೇಲೆ ಹೊಡೆತ ಬಿದ್ದಿದೆ. ಇದರಿಂದ ರೈತರು ಮತ್ತು ಸಣ್ಣ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.</p>.<p>ಪ್ರಸ್ತುತ ಬಿಸಿಲಿನ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ನಷ್ಟಿದೆ. ಸದ್ಯ ಸುಡು ಬಿಸಿಲಿಗೆ ಪಟ್ಟಣದಲ್ಲಿ ನಡೆಯುವ ಶುಕ್ರವಾರ ಸಂತೆ ಬಿಕೋ ಎನ್ನಿಸುತ್ತಿದೆ. ಒಂದೆಡೆ ಬಿಸಿಲಿಗೆ ಹಸಿರು ಸೊಪ್ಪು, ತರಕಾರಿಗಳು ತಾಜಾತನ ಕಳೆದುಕೊಂಡರೆ, ಮತ್ತೊಂದೆಡೆ ಗ್ರಾಹಕರಿಲ್ಲದೆ ವ್ಯಾಪಾರ ವಹಿವಾಟು ಕುಸಿತ ಕಂಡಿದೆ.</p>.<p>ಸಂತೆಯಲ್ಲಿ ಸೊಪ್ಪು, ತರಕಾರಿ, ದಿನಸಿ, ಹಣ್ಣುಗಳನ್ನು ಮಾರಾಟ ಮಾಡುವ ಸಣ್ಣ ವ್ಯಾಪಾರಿಗಳು ಬಿಸಿಲಿನ ತಾಪಕ್ಕೆ ದೊಡ್ಡ ಛತ್ರಿಗಳ ಆಶ್ರಯದಲ್ಲಿ ಗ್ರಾಹಕರಿಗಾಗಿ ಕಾದು ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಬೆಳಿಗ್ಗೆಯಿಂದ ಸಂಜೆವರೆಗೂ ವ್ಯಾಪಾರ ನಡೆಸಿದರೂ ಹಾಕಿದ ಬಂಡವಾಳ ಬರುತ್ತಿಲ್ಲ ಎನ್ನುತ್ತಾರೆ ವ್ಯಾಪಾರಸ್ಥರು.</p>.<p>ಹಿಂದೆ ಸಂತೆಯಲ್ಲಿ ದಿನವೀಡಿ ವ್ಯಾಪಾರ ನಡೆಯುತ್ತಿತ್ತು. ಜನಜಂಗುಳಿ ಹೆಚ್ಚಾಗಿರುತ್ತಿತ್ತು. ಆದರೆ, ಈಗ ಬಿಸಿಲಿಗೆ ಹೆದರಿ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಸಂತೆಯ ಕಡೆ ಸುಳಿಯುತ್ತಿಲ್ಲ. ಸಣ್ಣ ವ್ಯಾಪಾರಿಗಳು ನಷ್ಟದ ಹಾದಿ ಹಿಡಿದಿದ್ದೇವೆ ಎಂದು ಸೊಪ್ಪಿನ ವ್ಯಾಪಾರಿ ಪುಷ್ಪ ತಿಳಿಸಿದರು.</p>.<p>ಪ್ರಸ್ತುತ ಬಿಸಿಲಿನ ತಾಪಮಾನ ವಿಪರೀತವಾಗಿದ್ದು, ವಾರದ ಸಂತೆಗೆ ಮೊದಲಿನಷ್ಟು ಗ್ರಾಹಕರು ಬರುತ್ತಿಲ್ಲ. ಬೆಳಿಗ್ಗೆ ಮತ್ತು ಸಂಜೆ ಮಾತ್ರ ಗ್ರಾಹಕರು ತರಕಾರಿಗಳನ್ನು ಖರೀದಿಸುತ್ತಿದ್ದಾರೆ. ಈಗ ಈರುಳ್ಳಿ, ಆಲೂಗಡ್ಡೆ ಸೇರಿದಂತೆ ಬಹುತೇಕ ತರಕಾರಿಗಳ ಬೆಲೆ ಕುಸಿದಿದೆ. ಬೆಳೆಗೆ ಹಾಕಿದ ಬಂಡವಾಳ ಕೈಗೆ ಬರುತ್ತಿಲ್ಲ, ನಷ್ಟ ಅನುಭವಿಸುವಂತಾಗಿದೆ ಎಂದು ರೈತ ನಾಗನಾಯಕನಹಳ್ಳಿಯ ಗ್ರಾಮದ ರೈತ ನಾಗರಾಜು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-15-1484981625</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>