<p><strong>ವಿಜಯಪುರ (ದೇವನಹಳ್ಳಿ): </strong>ಪಟ್ಟಣದ ಪುರಸಭೆ ಬಳಿ ಇತ್ತೀಚೆಗೆ ಆರಂಭಗೊಂಡ ಇಂದಿರಾ ಕ್ಯಾಂಟೀನ್ಗೆ ಪುರಸಭೆ ಸದಸ್ಯರು ಬುಧವಾರ ಭೇಟಿ ನೀಡಿ ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ಸೌಕರ್ಯ ವ್ಯವಸ್ಥೆ ಪರಿಶೀಲಿಸಿದರು.</p>.<p>ಪುರಸಭೆ ಅಧ್ಯಕ್ಷೆ ಭವ್ಯ ಮಹೇಶ್ ಅವರು ಕ್ಯಾಂಟೀನ್ನಲ್ಲಿ ಊಟ ಮಾಡುತ್ತಿದ್ದವರ ಬಳಿ ಆಹಾರ ಗುಣಮಟ್ಟ, ಸ್ವಚ್ಛತೆ ಮತ್ತು ಅಗತ್ಯವಿರುವಷ್ಟು ಆಹಾರ ಪೂರೈಸಲಾಗುತ್ತಿದೆಯೇ ಎಂಬ ಕುರಿತು ಮಾಹಿತಿ ಪಡೆದರು. ಕ್ಯಾಂಟೀನ್ನಲ್ಲಿ ಉತ್ತಮ ಗುಣಮಟ್ಟದ ಆಹಾರ ಪೂರೈಸಲಾಗುತ್ತಿದೆ. ಯಾವುದೇ ಸಮಸ್ಯೆಗಳಿಲ್ಲ ಎಂದು ಗ್ರಾಹಕರು ತಿಳಿಸಿದರು.</p>.<p>ಮಧ್ಯಾಹ್ನದ ಊಟವನ್ನು ಇಂದಿರಾ ಕ್ಯಾಂಟೀನ್ನಲ್ಲಿ ಸವಿದ ಪುರಸಭೆ ಅಧ್ಯಕ್ಷೆ ಭವ್ಯ ಮಹೇಶ್, ಸಾರ್ವಜನಿಕರಿಗೆ ಗುಣಮಟ್ಟದ ಆಹಾರ ವಿತರಿಸಬೇಕು ಎಂದು ಕ್ಯಾಂಟೀನ್ ಸಿಬ್ಬಂದಿಗೆ ಸಲಹೆ ನೀಡಿದರು. </p>.<p>ಕ್ಯಾಂಟೀನ್ಗೆ ಸಂಬಂಧಿಸಿದಂತೆ ಏನಾದರೂ ಕುಂದುಕೊರತೆಗಳಿದ್ದಲ್ಲಿ, ತಿಳಿಸುವಂತೆ ಕ್ಯಾಂಟೀನ್ ವ್ಯವಸ್ಥಾಪಕರಿಗೆ ಸೂಚಿಸಿದರು. </p>.<p>ಪುರಸಭೆ ಸದಸ್ಯ ನಂದಕುಮಾರ್ ಮಾತನಾಡಿ, ಬಡವರು ಮತ್ತು ಮಧ್ಯಮ ವರ್ಗದವರೇ ಹೆಚ್ಚಾಗಿ ಆಹಾರ ಸೇವಿಸುವ ಇಂದಿರಾ ಕ್ಯಾಂಟೀನ್ನಲ್ಲಿ ಸ್ವಚ್ಛತೆ ಮತ್ತು ಗುಣಮಟ್ಟ ಕಾಪಾಡಬೇಕು. ಕುಡಿಯಲು ಬಿಸಿನೀರಿನ ವ್ಯವಸ್ಥೆ ಮಾಡಬೇಕು ಎಂದು ಕ್ಯಾಂಟೀನ್ ವ್ಯವಸ್ಥಾಪಕರಿಗೆ ಸೂಚಿಸಿದರು.</p>.<p>ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ್, ಆರೋಗ್ಯಾಧಿಕಾರಿ ಲಾವಣ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ದೇವನಹಳ್ಳಿ): </strong>ಪಟ್ಟಣದ ಪುರಸಭೆ ಬಳಿ ಇತ್ತೀಚೆಗೆ ಆರಂಭಗೊಂಡ ಇಂದಿರಾ ಕ್ಯಾಂಟೀನ್ಗೆ ಪುರಸಭೆ ಸದಸ್ಯರು ಬುಧವಾರ ಭೇಟಿ ನೀಡಿ ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ಸೌಕರ್ಯ ವ್ಯವಸ್ಥೆ ಪರಿಶೀಲಿಸಿದರು.</p>.<p>ಪುರಸಭೆ ಅಧ್ಯಕ್ಷೆ ಭವ್ಯ ಮಹೇಶ್ ಅವರು ಕ್ಯಾಂಟೀನ್ನಲ್ಲಿ ಊಟ ಮಾಡುತ್ತಿದ್ದವರ ಬಳಿ ಆಹಾರ ಗುಣಮಟ್ಟ, ಸ್ವಚ್ಛತೆ ಮತ್ತು ಅಗತ್ಯವಿರುವಷ್ಟು ಆಹಾರ ಪೂರೈಸಲಾಗುತ್ತಿದೆಯೇ ಎಂಬ ಕುರಿತು ಮಾಹಿತಿ ಪಡೆದರು. ಕ್ಯಾಂಟೀನ್ನಲ್ಲಿ ಉತ್ತಮ ಗುಣಮಟ್ಟದ ಆಹಾರ ಪೂರೈಸಲಾಗುತ್ತಿದೆ. ಯಾವುದೇ ಸಮಸ್ಯೆಗಳಿಲ್ಲ ಎಂದು ಗ್ರಾಹಕರು ತಿಳಿಸಿದರು.</p>.<p>ಮಧ್ಯಾಹ್ನದ ಊಟವನ್ನು ಇಂದಿರಾ ಕ್ಯಾಂಟೀನ್ನಲ್ಲಿ ಸವಿದ ಪುರಸಭೆ ಅಧ್ಯಕ್ಷೆ ಭವ್ಯ ಮಹೇಶ್, ಸಾರ್ವಜನಿಕರಿಗೆ ಗುಣಮಟ್ಟದ ಆಹಾರ ವಿತರಿಸಬೇಕು ಎಂದು ಕ್ಯಾಂಟೀನ್ ಸಿಬ್ಬಂದಿಗೆ ಸಲಹೆ ನೀಡಿದರು. </p>.<p>ಕ್ಯಾಂಟೀನ್ಗೆ ಸಂಬಂಧಿಸಿದಂತೆ ಏನಾದರೂ ಕುಂದುಕೊರತೆಗಳಿದ್ದಲ್ಲಿ, ತಿಳಿಸುವಂತೆ ಕ್ಯಾಂಟೀನ್ ವ್ಯವಸ್ಥಾಪಕರಿಗೆ ಸೂಚಿಸಿದರು. </p>.<p>ಪುರಸಭೆ ಸದಸ್ಯ ನಂದಕುಮಾರ್ ಮಾತನಾಡಿ, ಬಡವರು ಮತ್ತು ಮಧ್ಯಮ ವರ್ಗದವರೇ ಹೆಚ್ಚಾಗಿ ಆಹಾರ ಸೇವಿಸುವ ಇಂದಿರಾ ಕ್ಯಾಂಟೀನ್ನಲ್ಲಿ ಸ್ವಚ್ಛತೆ ಮತ್ತು ಗುಣಮಟ್ಟ ಕಾಪಾಡಬೇಕು. ಕುಡಿಯಲು ಬಿಸಿನೀರಿನ ವ್ಯವಸ್ಥೆ ಮಾಡಬೇಕು ಎಂದು ಕ್ಯಾಂಟೀನ್ ವ್ಯವಸ್ಥಾಪಕರಿಗೆ ಸೂಚಿಸಿದರು.</p>.<p>ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ್, ಆರೋಗ್ಯಾಧಿಕಾರಿ ಲಾವಣ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>