<p><strong>ವಿಜಯಪುರ (ದೇವನಹಳ್ಳಿ):</strong> ಪಟ್ಟಣದ ಸಾಯಿ ಜ್ಞಾನ ಗಂಗಾ ಪದವಿ ಕಾಲೇಜಿನಲ್ಲಿ ಕಸಾಪ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ 112ನೇ ಸಂಸ್ಥಾಪನಾ ದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.</p>.<p>ವಿದ್ಯಾರ್ಥಿಗಳು ಕನ್ನಡ ಭಾಷೆ ಕಂಪು ಪಸರಿಸುವ ಕೆಲಸ ಮಾಡಬೇಕು ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಆರ್.ಕೆ.ನಂಜೇಗೌಡ ತಿಳಿಸಿದರು.</p>.<p>ಕಸಾಪ ಸದಸ್ಯತ್ವದ ಶುಲ್ಕ ಅತ್ಯಂತ ಕಡಿಮೆ ಇದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆಯಬೇಕು ಎಂದು ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ತಿಳಿಸಿದರು.</p>.<p>‘ನಮ್ಮ ಭಾಷೆ ಮತ್ತು ಸಂಸ್ಕೃತಿ ಶಕ್ತಿ ಪಾರವಾದುದು. ವಿದ್ಯಾರ್ಥಿಗಳು ದೈನಂದಿನ ವ್ಯವಹಾರದಲ್ಲಿ ಕನ್ನಡ ಪದ ಹಾಗೂ ಅಂಕೆ ಬಳಸುವ ಮೂಲಕ ಇತರರಿಗೆ ಪ್ರೇರಕರಾಗಬೇಕು’ ಎಂದು ಶಿಕ್ಷಕಿ ಸುಕನ್ಯಾ ಬೈರೇಗೌಡ ಹೇಳಿದರು.</p>.<p><strong>ನೇಮಕ</strong>: ಸಂಘ-ಸಂಸ್ಥೆಗಳ ಪ್ರತಿನಿಧಿಯಾಗಿ ಎನ್.ಸಿ.ಮನೋವೆಂಕಟರಮಣ, ಅಲ್ಪಸಂಖ್ಯಾತ ಘಟಕದ ಪ್ರತಿನಿಧಿಯಾಗಿ ಎಫ್.ಬಾಬಾಜಾನ್, ಗೌರವ ಕಾರ್ಯದರ್ಶಿ ವಿ.ಗೋವಿಂದರಾಜು, ಪರಿಶಿಷ್ಟ ಜಾತಿ ಪ್ರತಿನಿಧಿಯಾಗಿ ನರಸಿಂಹಮೂರ್ತಿ ಅವರನ್ನು ನೇಮಿಸಿ ಪ್ರಮಾಣ ಪತ್ರ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ದೇವನಹಳ್ಳಿ):</strong> ಪಟ್ಟಣದ ಸಾಯಿ ಜ್ಞಾನ ಗಂಗಾ ಪದವಿ ಕಾಲೇಜಿನಲ್ಲಿ ಕಸಾಪ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ 112ನೇ ಸಂಸ್ಥಾಪನಾ ದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.</p>.<p>ವಿದ್ಯಾರ್ಥಿಗಳು ಕನ್ನಡ ಭಾಷೆ ಕಂಪು ಪಸರಿಸುವ ಕೆಲಸ ಮಾಡಬೇಕು ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಆರ್.ಕೆ.ನಂಜೇಗೌಡ ತಿಳಿಸಿದರು.</p>.<p>ಕಸಾಪ ಸದಸ್ಯತ್ವದ ಶುಲ್ಕ ಅತ್ಯಂತ ಕಡಿಮೆ ಇದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆಯಬೇಕು ಎಂದು ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ತಿಳಿಸಿದರು.</p>.<p>‘ನಮ್ಮ ಭಾಷೆ ಮತ್ತು ಸಂಸ್ಕೃತಿ ಶಕ್ತಿ ಪಾರವಾದುದು. ವಿದ್ಯಾರ್ಥಿಗಳು ದೈನಂದಿನ ವ್ಯವಹಾರದಲ್ಲಿ ಕನ್ನಡ ಪದ ಹಾಗೂ ಅಂಕೆ ಬಳಸುವ ಮೂಲಕ ಇತರರಿಗೆ ಪ್ರೇರಕರಾಗಬೇಕು’ ಎಂದು ಶಿಕ್ಷಕಿ ಸುಕನ್ಯಾ ಬೈರೇಗೌಡ ಹೇಳಿದರು.</p>.<p><strong>ನೇಮಕ</strong>: ಸಂಘ-ಸಂಸ್ಥೆಗಳ ಪ್ರತಿನಿಧಿಯಾಗಿ ಎನ್.ಸಿ.ಮನೋವೆಂಕಟರಮಣ, ಅಲ್ಪಸಂಖ್ಯಾತ ಘಟಕದ ಪ್ರತಿನಿಧಿಯಾಗಿ ಎಫ್.ಬಾಬಾಜಾನ್, ಗೌರವ ಕಾರ್ಯದರ್ಶಿ ವಿ.ಗೋವಿಂದರಾಜು, ಪರಿಶಿಷ್ಟ ಜಾತಿ ಪ್ರತಿನಿಧಿಯಾಗಿ ನರಸಿಂಹಮೂರ್ತಿ ಅವರನ್ನು ನೇಮಿಸಿ ಪ್ರಮಾಣ ಪತ್ರ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>