<p><strong>ವಿಜಯಪುರ (ದೇವನಹಳ್ಳಿ):</strong> ಪಟ್ಟಣದ ಬಿಎಂಎಸ್ ಸಮುದಾಯ ಭವನದಲ್ಲಿ ಶುಕ್ರವಾರ ಮಧ್ಯಾಹ್ನ ವಿನಾಯಕ ಕೃಪಾ ಪೋಷಿತ ನಾಟಕ ಮಂಡಳಿ ವತಿಯಿಂದ ‘ಕುರುಕ್ಷೇತ್ರ’ ಕನ್ನಡ ಪೌರಾಣಿಕ ನಾಟಕ ಪ್ರದರ್ಶನವಾಯಿತು.</p>.<p>ಈ ವೇಳೆ ಸಂಗೀತ ನಿರ್ದೇಶಕ ಹನುಮಂತ ರಾಜ್ ಮಾತನಾಡಿ, ನಾಟಕಗಳಲ್ಲಿ ಬರುವ ಪ್ರತಿಯೊಂದು ಸನ್ನಿವೇಶವೂ ನಮ್ಮ ಜೀವನಕ್ಕೆ ಹತ್ತಿರವಾಗಿದೆ. ರಂಗಕಲೆಯನ್ನು ಇನ್ನು ಜೀವಂತವಾಗಿಟ್ಟುಕೊಂಡು ಮುಂದಿನ ಪೀಳಿಗೆಗೆ ಕೊಡುಗೆ ನೀಡಲು ರಂಗ ಕಲಾವಿದರು ಶ್ರಮಿಸುತ್ತಿರುವುದು ಉತ್ತಮ ಬೆಳೆವಣಿಗೆ. ನಾಟಕಗಳನ್ನು ಪ್ರೋತ್ಸಾಹಿಸುವಂತಹ ಕೆಲಸವಾಗಬೇಕು ಎಂದು ಹೇಳಿದರು.</p>.<p>ಕಲಾವಿದ ಮೋಹನ್ ಬಾಬು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ನಾಟಕಗಳು ಪ್ರದರ್ಶನಗೊಳ್ಳುತ್ತಿರುವುದು ಸಂತೋಷದ ವಿಚಾರ. ನಶಿಸಿ ಹೋಗುತ್ತಿರುವ ರಂಗ ಕಲೆಯನ್ನು ಉಳಿಸಿ ಬೆಳೆಸಬೇಕಿದೆ. ಇಂತಹ ಕಾರ್ಯಗಳಿಗೆ ಸಾರ್ವಜನಿಕರು ಸಹಾಯಹಸ್ತ ನೀಡಬೇಕು ಎಂದರು.</p>.<p>ಹಿರಿಯ ರಂಗ ಕಲಾವಿದರು, ಸಾರ್ವಜನಿಕರು ನಾಟಕ ವೀಕ್ಷಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ದೇವನಹಳ್ಳಿ):</strong> ಪಟ್ಟಣದ ಬಿಎಂಎಸ್ ಸಮುದಾಯ ಭವನದಲ್ಲಿ ಶುಕ್ರವಾರ ಮಧ್ಯಾಹ್ನ ವಿನಾಯಕ ಕೃಪಾ ಪೋಷಿತ ನಾಟಕ ಮಂಡಳಿ ವತಿಯಿಂದ ‘ಕುರುಕ್ಷೇತ್ರ’ ಕನ್ನಡ ಪೌರಾಣಿಕ ನಾಟಕ ಪ್ರದರ್ಶನವಾಯಿತು.</p>.<p>ಈ ವೇಳೆ ಸಂಗೀತ ನಿರ್ದೇಶಕ ಹನುಮಂತ ರಾಜ್ ಮಾತನಾಡಿ, ನಾಟಕಗಳಲ್ಲಿ ಬರುವ ಪ್ರತಿಯೊಂದು ಸನ್ನಿವೇಶವೂ ನಮ್ಮ ಜೀವನಕ್ಕೆ ಹತ್ತಿರವಾಗಿದೆ. ರಂಗಕಲೆಯನ್ನು ಇನ್ನು ಜೀವಂತವಾಗಿಟ್ಟುಕೊಂಡು ಮುಂದಿನ ಪೀಳಿಗೆಗೆ ಕೊಡುಗೆ ನೀಡಲು ರಂಗ ಕಲಾವಿದರು ಶ್ರಮಿಸುತ್ತಿರುವುದು ಉತ್ತಮ ಬೆಳೆವಣಿಗೆ. ನಾಟಕಗಳನ್ನು ಪ್ರೋತ್ಸಾಹಿಸುವಂತಹ ಕೆಲಸವಾಗಬೇಕು ಎಂದು ಹೇಳಿದರು.</p>.<p>ಕಲಾವಿದ ಮೋಹನ್ ಬಾಬು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ನಾಟಕಗಳು ಪ್ರದರ್ಶನಗೊಳ್ಳುತ್ತಿರುವುದು ಸಂತೋಷದ ವಿಚಾರ. ನಶಿಸಿ ಹೋಗುತ್ತಿರುವ ರಂಗ ಕಲೆಯನ್ನು ಉಳಿಸಿ ಬೆಳೆಸಬೇಕಿದೆ. ಇಂತಹ ಕಾರ್ಯಗಳಿಗೆ ಸಾರ್ವಜನಿಕರು ಸಹಾಯಹಸ್ತ ನೀಡಬೇಕು ಎಂದರು.</p>.<p>ಹಿರಿಯ ರಂಗ ಕಲಾವಿದರು, ಸಾರ್ವಜನಿಕರು ನಾಟಕ ವೀಕ್ಷಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>