<p><strong>ವಿಜಯಪುರ (ದೇವನಹಳ್ಳಿ): </strong>ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಆರೋಪಿಯನ್ನು ವಿಜಯಪುರ ಟೌನ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಬೆಂಗಳೂರಿನ ಡಿ.ಜೆ ಹಳ್ಳಿಯ ಆರೀಫ್ ಖಾನ್ (25) ಬಂಧಿತ. ಮಾರ್ಚ್ 17ರಂದು ಪದ್ಮಾವತಿ ಎಂಬುವರ ₹5 ಲಕ್ಷ ಬೆಲೆಬಾಳುವ 55 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಬೈಕ್ನಲ್ಲಿ ಬಂದ ಆರೋಪಿ ಕದ್ದು ಪರಾರಿಯಾಗಿದ್ದ. </p>.<p>ಚಿಕ್ಕಬಳ್ಳಾಪುರ-ದೇವನಹಳ್ಳಿಯ ರಾಷ್ಟ್ರೀಯ ಹೆದ್ದಾರಿ ಸಮೀಪದ ಮುನೇಶ್ವರಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಲು ಹೆದ್ದಾರಿ ಸಂಪರ್ಕಿಸುವ ಸರ್ವಿಸ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಪದ್ಮಾವತಿ ಅವರನ್ನು ಆರೋಪಿ ಹಿಂದಿನಿಂದ ಬೈಕ್ನಲ್ಲಿ ಬೆನ್ನತ್ತಿದ್ದ. ಕುತ್ತಿಗೆಗೆ ಕೈ ಹಾಕಿ ಕತ್ತಿನಲ್ಲಿದ್ದ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದ. </p>.<p>ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಲಾಗಿತ್ತು. ಶುಕ್ರವಾರ ಆರೋಪಿಯಿಂದ ಚಿನ್ನದ ಮಾಂಗಲ್ಯ ಸರ ಮತ್ತು ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಿಜಯಪುರ ಟೌನ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ದೇವನಹಳ್ಳಿ): </strong>ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಆರೋಪಿಯನ್ನು ವಿಜಯಪುರ ಟೌನ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಬೆಂಗಳೂರಿನ ಡಿ.ಜೆ ಹಳ್ಳಿಯ ಆರೀಫ್ ಖಾನ್ (25) ಬಂಧಿತ. ಮಾರ್ಚ್ 17ರಂದು ಪದ್ಮಾವತಿ ಎಂಬುವರ ₹5 ಲಕ್ಷ ಬೆಲೆಬಾಳುವ 55 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಬೈಕ್ನಲ್ಲಿ ಬಂದ ಆರೋಪಿ ಕದ್ದು ಪರಾರಿಯಾಗಿದ್ದ. </p>.<p>ಚಿಕ್ಕಬಳ್ಳಾಪುರ-ದೇವನಹಳ್ಳಿಯ ರಾಷ್ಟ್ರೀಯ ಹೆದ್ದಾರಿ ಸಮೀಪದ ಮುನೇಶ್ವರಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಲು ಹೆದ್ದಾರಿ ಸಂಪರ್ಕಿಸುವ ಸರ್ವಿಸ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಪದ್ಮಾವತಿ ಅವರನ್ನು ಆರೋಪಿ ಹಿಂದಿನಿಂದ ಬೈಕ್ನಲ್ಲಿ ಬೆನ್ನತ್ತಿದ್ದ. ಕುತ್ತಿಗೆಗೆ ಕೈ ಹಾಕಿ ಕತ್ತಿನಲ್ಲಿದ್ದ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದ. </p>.<p>ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಲಾಗಿತ್ತು. ಶುಕ್ರವಾರ ಆರೋಪಿಯಿಂದ ಚಿನ್ನದ ಮಾಂಗಲ್ಯ ಸರ ಮತ್ತು ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಿಜಯಪುರ ಟೌನ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>