<p>ವಿಜಯಪುರ (ದೇವನಹಳ್ಳಿ): ಪಟ್ಟಣದ ರೇಣುಕಾ ಯಲ್ಲಮ್ಮ ದೇವಾಲಯದ 87ನೇ ವರ್ಷದ ಹೂವಿನ ಕರಗ ಮಹೋತ್ಸವ ಅಂಗವಾಗಿ ಸೋಮವಾರ ರಾತ್ರಿ ಹಸಿ ಕರಗ ನಡೆಯಿತು.</p>.<p>ಹಸಿ ಕರಗ ಹೊತ್ತು ಪೂಜಾರಿ ಜೆ.ಆರ್.ದೇವರಾಜ್ ಅವರು ಪಟ್ಟಣದಲ್ಲಿ ಸಂಚರಿಸಿದರು. ಕರಗ ಬರುವ ಬೀದಿಗಳಿಗೆ ವಿದ್ಯುತ್ ಅಲಂಕಾರ ಮಾಡಲಾಗಿತ್ತು. ಮಹಿಳೆಯರು ತಮ್ಮ ಮನೆ ಮುಂದೆ ರಂಗೋಲಿ ಬಿಡಿಸಿ ಹಸಿಕರಗಕ್ಕೆ ಪೂಜೆ ಸಲ್ಲಿಸಿದರು.</p>.<p>ಮಂಗಳವಾರ ರೇಣುಕಾ ಯಲ್ಲಮ್ಮದೇವಿಗೆ ಅಭಿಷೇಕ, ಹೂವಿನ ಅಲಂಕಾರ, ಮಹಾಮಂಗಳಾರತಿ ನಡೆಯಿತು. ರಾತ್ರಿ 7 ಗಂಟೆಗೆ ದೀಪಾರತಿ, ಅಗ್ನಿಪ್ರವೇಶ ಕಾರ್ಯಕ್ರಮಗಳು ಜರುಗಿದವು.</p>.<p>ಏ. 1 ರಂದು ರೇಣುಕಾ ಯಲ್ಲಮ್ಮ ಹೂವಿನ ಕರಗ ಮಹೋತ್ಸವ ನಡೆಯಲಿದೆ. ಅಂದು ಪಟ್ಟಣದ ನಗರೇಶ್ವರ ಮತ್ತು ಆದಿನಾರಾಯಣ 11ನೇ ವರ್ಷದ ಹರಿ-ಹರ ಕಲ್ಲುಗಾಲಿ ರಥೋತ್ಸವ, ಚಿಕ್ಕ ಮಕ್ಕಳಿಂದ ಎಳೆಯಲ್ಪಡುವ 41ನೇ ವರ್ಷದ ಬಲಮುರಿ ಗಣಪತಿ, ಭದ್ರಕಾಳಿ ಸಮೇತ ರುದ್ರದೇವರ ರಥೋತ್ಸವ ನಡೆಯಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-15-282982721</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ (ದೇವನಹಳ್ಳಿ): ಪಟ್ಟಣದ ರೇಣುಕಾ ಯಲ್ಲಮ್ಮ ದೇವಾಲಯದ 87ನೇ ವರ್ಷದ ಹೂವಿನ ಕರಗ ಮಹೋತ್ಸವ ಅಂಗವಾಗಿ ಸೋಮವಾರ ರಾತ್ರಿ ಹಸಿ ಕರಗ ನಡೆಯಿತು.</p>.<p>ಹಸಿ ಕರಗ ಹೊತ್ತು ಪೂಜಾರಿ ಜೆ.ಆರ್.ದೇವರಾಜ್ ಅವರು ಪಟ್ಟಣದಲ್ಲಿ ಸಂಚರಿಸಿದರು. ಕರಗ ಬರುವ ಬೀದಿಗಳಿಗೆ ವಿದ್ಯುತ್ ಅಲಂಕಾರ ಮಾಡಲಾಗಿತ್ತು. ಮಹಿಳೆಯರು ತಮ್ಮ ಮನೆ ಮುಂದೆ ರಂಗೋಲಿ ಬಿಡಿಸಿ ಹಸಿಕರಗಕ್ಕೆ ಪೂಜೆ ಸಲ್ಲಿಸಿದರು.</p>.<p>ಮಂಗಳವಾರ ರೇಣುಕಾ ಯಲ್ಲಮ್ಮದೇವಿಗೆ ಅಭಿಷೇಕ, ಹೂವಿನ ಅಲಂಕಾರ, ಮಹಾಮಂಗಳಾರತಿ ನಡೆಯಿತು. ರಾತ್ರಿ 7 ಗಂಟೆಗೆ ದೀಪಾರತಿ, ಅಗ್ನಿಪ್ರವೇಶ ಕಾರ್ಯಕ್ರಮಗಳು ಜರುಗಿದವು.</p>.<p>ಏ. 1 ರಂದು ರೇಣುಕಾ ಯಲ್ಲಮ್ಮ ಹೂವಿನ ಕರಗ ಮಹೋತ್ಸವ ನಡೆಯಲಿದೆ. ಅಂದು ಪಟ್ಟಣದ ನಗರೇಶ್ವರ ಮತ್ತು ಆದಿನಾರಾಯಣ 11ನೇ ವರ್ಷದ ಹರಿ-ಹರ ಕಲ್ಲುಗಾಲಿ ರಥೋತ್ಸವ, ಚಿಕ್ಕ ಮಕ್ಕಳಿಂದ ಎಳೆಯಲ್ಪಡುವ 41ನೇ ವರ್ಷದ ಬಲಮುರಿ ಗಣಪತಿ, ಭದ್ರಕಾಳಿ ಸಮೇತ ರುದ್ರದೇವರ ರಥೋತ್ಸವ ನಡೆಯಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-15-282982721</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>