<p>ವಿಜಯಪುರ (ದೇವನಹಳ್ಳಿ): ಇಲ್ಲಿನ ಬಸವೇಶ್ವರ ನಗರದಲ್ಲಿ ಬೆಂ.ಗ್ರಾ ಜಿಲ್ಲಾ ಕದಳಿ ಮಹಿಳಾ ವೇದಿಕೆ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ಶಿವಶರಣ ಅಲ್ಲಮಪ್ರಭು, ದೇವರ ದಾಸಿಮಯ್ಯ ಹಾಗೂ ಬಿಬ್ಬಿ ಬಾಚಯ್ಯ ಜಯಂತಿ ಆಚರಿಸಲಾಯಿತು.</p>.<p>ಶರಣರ ತತ್ವಗಳು ಸಮಾಜಕ್ಕೆ ದಾರಿ ದೀಪವಾಗಿದ್ದು, ಮಹಿಳೆಯರನ್ನು ಸಂಘಟಿಸಿ, ಅವರಲ್ಲಿ ಅಧ್ಯಾತ್ಮ ಹಾಗೂ ಸಾಮಾಜಿಕ ಪ್ರಜ್ಞೆ ಮೂಡಿಸುವಲ್ಲಿ ಕದಳಿ ಮಹಿಳಾ ವೇದಿಕೆ ಶ್ರಮಿಸುತ್ತಿದೆ ಎಂದು ವೇದಿಕೆ ಜಿಲ್ಲಾಧ್ಯಕ್ಷೆ ಸ್ವರ್ಣಗೌರಿ ಮಹದೇವ್ ತಿಳಿಸಿದರು.</p>.<p>ಅಲ್ಲಮಪ್ರಭುಗಳು ಜ್ಞಾನದ ಸಂಕೇತ. ಅವರ ವಚನಗಳು ಮನುಷ್ಯನ ಅಹಂಕಾರವನ್ನು ಅಳಿಸಿ, ಆತ್ಮಸಾಕ್ಷಾತ್ಕಾರದತ್ತ ನಡೆಸುತ್ತವೆ ಎಂದು ವೇದಿಕೆ ಸದಸ್ಯೆ ಶ್ವೇತಾ ಮಂಜುನಾಥ್ ಹೇಳಿದರು.</p>.<p>ಶಿವಶರಣ ಬಿಬ್ಬಿ ಬಾಚಯ್ಯನವರ ಜೀವನ ನಮಗೆ ಸತ್ಯ ಮತ್ತು ನಿಷ್ಠೆಯ ಹಾದಿಯನ್ನು ತೋರಿಸಿಕೊಟ್ಟಿದ್ದಾರೆ ಎಂದು ಸೌಮ್ಯ ಶಶಿಧರ್ ಸ್ಮರಿಸಿದರು.</p>.<p>ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ್ ಹಡಪದ್, ಕಾರ್ಯದರ್ಶಿ ಆರ್.ಮುನಿರಾಜು, ರಾಷ್ಟ್ರೀಯ ಬಸವದಳದ ಟೌನ್ ಕಾರ್ಯದರ್ಶಿ ಮ. ಜಯದೇವ್, ರೂಪ ಭಾಸ್ಕರ್, ಆಶಾ ರವಿ, ಮಮತಾ, ಭವ್ಯ, ಆದರ್ಶ, ಅನುಷಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-15-1426127537</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ (ದೇವನಹಳ್ಳಿ): ಇಲ್ಲಿನ ಬಸವೇಶ್ವರ ನಗರದಲ್ಲಿ ಬೆಂ.ಗ್ರಾ ಜಿಲ್ಲಾ ಕದಳಿ ಮಹಿಳಾ ವೇದಿಕೆ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ಶಿವಶರಣ ಅಲ್ಲಮಪ್ರಭು, ದೇವರ ದಾಸಿಮಯ್ಯ ಹಾಗೂ ಬಿಬ್ಬಿ ಬಾಚಯ್ಯ ಜಯಂತಿ ಆಚರಿಸಲಾಯಿತು.</p>.<p>ಶರಣರ ತತ್ವಗಳು ಸಮಾಜಕ್ಕೆ ದಾರಿ ದೀಪವಾಗಿದ್ದು, ಮಹಿಳೆಯರನ್ನು ಸಂಘಟಿಸಿ, ಅವರಲ್ಲಿ ಅಧ್ಯಾತ್ಮ ಹಾಗೂ ಸಾಮಾಜಿಕ ಪ್ರಜ್ಞೆ ಮೂಡಿಸುವಲ್ಲಿ ಕದಳಿ ಮಹಿಳಾ ವೇದಿಕೆ ಶ್ರಮಿಸುತ್ತಿದೆ ಎಂದು ವೇದಿಕೆ ಜಿಲ್ಲಾಧ್ಯಕ್ಷೆ ಸ್ವರ್ಣಗೌರಿ ಮಹದೇವ್ ತಿಳಿಸಿದರು.</p>.<p>ಅಲ್ಲಮಪ್ರಭುಗಳು ಜ್ಞಾನದ ಸಂಕೇತ. ಅವರ ವಚನಗಳು ಮನುಷ್ಯನ ಅಹಂಕಾರವನ್ನು ಅಳಿಸಿ, ಆತ್ಮಸಾಕ್ಷಾತ್ಕಾರದತ್ತ ನಡೆಸುತ್ತವೆ ಎಂದು ವೇದಿಕೆ ಸದಸ್ಯೆ ಶ್ವೇತಾ ಮಂಜುನಾಥ್ ಹೇಳಿದರು.</p>.<p>ಶಿವಶರಣ ಬಿಬ್ಬಿ ಬಾಚಯ್ಯನವರ ಜೀವನ ನಮಗೆ ಸತ್ಯ ಮತ್ತು ನಿಷ್ಠೆಯ ಹಾದಿಯನ್ನು ತೋರಿಸಿಕೊಟ್ಟಿದ್ದಾರೆ ಎಂದು ಸೌಮ್ಯ ಶಶಿಧರ್ ಸ್ಮರಿಸಿದರು.</p>.<p>ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ್ ಹಡಪದ್, ಕಾರ್ಯದರ್ಶಿ ಆರ್.ಮುನಿರಾಜು, ರಾಷ್ಟ್ರೀಯ ಬಸವದಳದ ಟೌನ್ ಕಾರ್ಯದರ್ಶಿ ಮ. ಜಯದೇವ್, ರೂಪ ಭಾಸ್ಕರ್, ಆಶಾ ರವಿ, ಮಮತಾ, ಭವ್ಯ, ಆದರ್ಶ, ಅನುಷಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-15-1426127537</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>