<p>ವಿಜಯಪುರ (ದೇವನಹಳ್ಳಿ): ಯುಗಾದಿ ಹಬ್ಬದ ಪ್ರಯುಕ್ತ ವಿಜಯಪುರ ಪಟ್ಟಣದ ಕಸಾಪ ವತಿಯಿಂದ 8ನೇ ವಾರ್ಡಿನ ಒಕ್ಕಲಿಗ ಬೀದಿ ಹಾಗೂ ರಾಮಮಂದಿರ ಬೀದಿಯಲ್ಲಿ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>ರಂಗೋಲಿ ಸ್ಪರ್ಧೆಯಲ್ಲಿ ಸಾವಿತಮ್ಮ ಪ್ರಥಮ, ಮಂಗಳಮ್ಮ ದ್ವಿತೀಯ, ಲಕ್ಷ್ಮೀ ತೃತೀಯ ಬಹುಮಾನ ಪಡೆದರೆ 8 ಮಂದಿಗೆ ಸಮಾಧಾನಕರ ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.</p>.<p>ರಂಗೋಲಿಯು ನಮ್ಮ ಸಂಸ್ಕೃತಿ ಸಂಕೇತವಾಗಿದೆ. ರಂಗೋಲಿಯಿಂದಲೇ ಆ ಮನೆಯ ಸಂಸ್ಕೃತಿ, ಸಂಪ್ರದಾಯ, ಹಿನ್ನಲೆ ತಿಳಿಯಬಹುದು. ರಂಗೋಲಿ ಬಿಡಿಸುವುದರಿಂದ ಮನಸ್ಸಿಗೆ ಖುಷಿ ಸಂತೋಷದ ಜೊತೆಗೆ ಆರೋಗ್ಯವು ದೊರೆಯುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೃಷ್ಣಪ್ಪ ತಿಳಿಸಿದರು.</p>.<p>ನಮ್ಮ ಹಿಂದಿನ ಸಂಪ್ರದಾಯ ಹಾಗೂ ಸಾಂಸ್ಕೃತಿ ಚಟುವಟಿಕೆಗಳನ್ನು ಉಳಿಸಿ, ಬೆಳೆಸಲು ಇಂತಹ ಸ್ಪರ್ಧೆಗಳು ಅನಿವಾರ್ಯವಾಗಿದೆ ಎಂದು ತಾಲ್ಲೂಕು ಕಸಾಪ ಅಧ್ಯಕ್ಷ ಆರ್.ಕೆ.ನಂಜೇಗೌಡ ಹೇಳಿದರು.</p>.<p>ವಿಜಯಪುರ ನಗರ ಘಟಕದ ಅಧ್ಯಕ್ಷ ಎನ್.ಕನಕರಾಜು, ತಾಲ್ಲೂಕು ಕಸಾಪ ಉಪಾಧ್ಯಕ್ಷ ಜೆ.ಆರ್.ಮುನಿವೀರಣ್ಣ, ಜಿಲ್ಲಾ ಕೋಶಧ್ಯಕ್ಷ ಅಪ್ಪಯ್ಯಣ್ಣ, ಸಾಹಿತಿ ಶರಣಯ್ಯ ಹಿರೇಮಠ್, ಜೆಸಿಐ ಮಾಜಿ ಅಧ್ಯಕ್ಷ ಎನ್ ಸಿ ಮುನಿವೆಂಕಟರಮಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-15-1666997068</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ (ದೇವನಹಳ್ಳಿ): ಯುಗಾದಿ ಹಬ್ಬದ ಪ್ರಯುಕ್ತ ವಿಜಯಪುರ ಪಟ್ಟಣದ ಕಸಾಪ ವತಿಯಿಂದ 8ನೇ ವಾರ್ಡಿನ ಒಕ್ಕಲಿಗ ಬೀದಿ ಹಾಗೂ ರಾಮಮಂದಿರ ಬೀದಿಯಲ್ಲಿ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>ರಂಗೋಲಿ ಸ್ಪರ್ಧೆಯಲ್ಲಿ ಸಾವಿತಮ್ಮ ಪ್ರಥಮ, ಮಂಗಳಮ್ಮ ದ್ವಿತೀಯ, ಲಕ್ಷ್ಮೀ ತೃತೀಯ ಬಹುಮಾನ ಪಡೆದರೆ 8 ಮಂದಿಗೆ ಸಮಾಧಾನಕರ ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.</p>.<p>ರಂಗೋಲಿಯು ನಮ್ಮ ಸಂಸ್ಕೃತಿ ಸಂಕೇತವಾಗಿದೆ. ರಂಗೋಲಿಯಿಂದಲೇ ಆ ಮನೆಯ ಸಂಸ್ಕೃತಿ, ಸಂಪ್ರದಾಯ, ಹಿನ್ನಲೆ ತಿಳಿಯಬಹುದು. ರಂಗೋಲಿ ಬಿಡಿಸುವುದರಿಂದ ಮನಸ್ಸಿಗೆ ಖುಷಿ ಸಂತೋಷದ ಜೊತೆಗೆ ಆರೋಗ್ಯವು ದೊರೆಯುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೃಷ್ಣಪ್ಪ ತಿಳಿಸಿದರು.</p>.<p>ನಮ್ಮ ಹಿಂದಿನ ಸಂಪ್ರದಾಯ ಹಾಗೂ ಸಾಂಸ್ಕೃತಿ ಚಟುವಟಿಕೆಗಳನ್ನು ಉಳಿಸಿ, ಬೆಳೆಸಲು ಇಂತಹ ಸ್ಪರ್ಧೆಗಳು ಅನಿವಾರ್ಯವಾಗಿದೆ ಎಂದು ತಾಲ್ಲೂಕು ಕಸಾಪ ಅಧ್ಯಕ್ಷ ಆರ್.ಕೆ.ನಂಜೇಗೌಡ ಹೇಳಿದರು.</p>.<p>ವಿಜಯಪುರ ನಗರ ಘಟಕದ ಅಧ್ಯಕ್ಷ ಎನ್.ಕನಕರಾಜು, ತಾಲ್ಲೂಕು ಕಸಾಪ ಉಪಾಧ್ಯಕ್ಷ ಜೆ.ಆರ್.ಮುನಿವೀರಣ್ಣ, ಜಿಲ್ಲಾ ಕೋಶಧ್ಯಕ್ಷ ಅಪ್ಪಯ್ಯಣ್ಣ, ಸಾಹಿತಿ ಶರಣಯ್ಯ ಹಿರೇಮಠ್, ಜೆಸಿಐ ಮಾಜಿ ಅಧ್ಯಕ್ಷ ಎನ್ ಸಿ ಮುನಿವೆಂಕಟರಮಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-15-1666997068</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>