<p><strong>ಆನೇಕಲ್:</strong> ಕಳೆದ ಹತ್ತು ದಿನಗಳಿಂದಲೂ ವಿದ್ಯುತ್ ಪೂರೈಕೆಯಿಲ್ಲದೇ ವಣಕನಹಳ್ಳಿ ಗ್ರಾಮವು ಕಗ್ಗತ್ತಲಿನಲ್ಲೇ ಮುಳುಗಿದ್ದು ಕುಡಿಯುವ ನೀರಿಗೂ ಪರದಾಡುವಂತಾಗಿದೆ. ಕೂಡಲೇ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿ ಆನೇಕಲ್ ತಾಲ್ಲೂಕಿನ ಕಮ್ಮಸಂದ್ರ ಅಗ್ರಹಾರದ ಸಮೀಪದ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಉಪ ವಿದ್ಯುತ್ ಕೇಂದ್ರಕ್ಕೆ ಬೀಗ ಹಾಕಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.</p>.<p>ವಣಕನಹಳ್ಳಿ ಗ್ರಾಮವು ತಾಲ್ಲೂಕಿನ ಗಡಿಗ್ರಾಮವಾಗಿದ್ದು ಕಳೆದ ವಾರ ಸುರಿದ ಭಾರಿ ಮಳೆಗೆ ವಿದ್ಯುತ್ ಕಂಬಗಳು ನೆಲಕಚ್ಚಿದ್ದವು. ಇದನ್ನು ಸರಿಪಡಿಸಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಗ್ರಾಮವು ವಿದ್ಯುತ್ ಇಲ್ಲದೇ ಪರದಾಡುವಂತಾಗಿದೆ.</p>.<p>ದನ ಕರುಗಳಿಗೆ ನೀರು, ಗ್ರಾಮದಲ್ಲಿನ ಬೆಳೆಗಳಿಗೆ ನೀರು ಪೂರೈಕೆ ಮಾಡಲು ವಿದ್ಯುತ್ ಇಲ್ಲ. ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಿದೆ. ಕೂಡಲೇ ಸರಿಪಡಿಸಬೇಕು ಎಂದು ಒತ್ತಾಯಿಸಿ ಗ್ರಾಮದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆನೇಕಲ್ ವಿದ್ಯುತ್ ಪ್ರಸರಣ ಘಟಕದ ಮುಂದೆ ಪ್ರತಿಭಟನೆ ನಡೆಸಿ ಕಚೇರಿಗೆ ಬೀಗ ಹಾಕಿದರು.</p>.<p>ಮುಖಂಡರಾದ ಬಾಬು, ರಮೇಶ್, ಶಶಿಧರ್ ರೆಡ್ಡಿ, ಧರ್ಮೇಂದ್ರ, ಸಂತೋಷ್, ಪ್ರವೀಣ್, ಸುಚೀಂದ್ರರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong> ಕಳೆದ ಹತ್ತು ದಿನಗಳಿಂದಲೂ ವಿದ್ಯುತ್ ಪೂರೈಕೆಯಿಲ್ಲದೇ ವಣಕನಹಳ್ಳಿ ಗ್ರಾಮವು ಕಗ್ಗತ್ತಲಿನಲ್ಲೇ ಮುಳುಗಿದ್ದು ಕುಡಿಯುವ ನೀರಿಗೂ ಪರದಾಡುವಂತಾಗಿದೆ. ಕೂಡಲೇ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿ ಆನೇಕಲ್ ತಾಲ್ಲೂಕಿನ ಕಮ್ಮಸಂದ್ರ ಅಗ್ರಹಾರದ ಸಮೀಪದ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಉಪ ವಿದ್ಯುತ್ ಕೇಂದ್ರಕ್ಕೆ ಬೀಗ ಹಾಕಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.</p>.<p>ವಣಕನಹಳ್ಳಿ ಗ್ರಾಮವು ತಾಲ್ಲೂಕಿನ ಗಡಿಗ್ರಾಮವಾಗಿದ್ದು ಕಳೆದ ವಾರ ಸುರಿದ ಭಾರಿ ಮಳೆಗೆ ವಿದ್ಯುತ್ ಕಂಬಗಳು ನೆಲಕಚ್ಚಿದ್ದವು. ಇದನ್ನು ಸರಿಪಡಿಸಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಗ್ರಾಮವು ವಿದ್ಯುತ್ ಇಲ್ಲದೇ ಪರದಾಡುವಂತಾಗಿದೆ.</p>.<p>ದನ ಕರುಗಳಿಗೆ ನೀರು, ಗ್ರಾಮದಲ್ಲಿನ ಬೆಳೆಗಳಿಗೆ ನೀರು ಪೂರೈಕೆ ಮಾಡಲು ವಿದ್ಯುತ್ ಇಲ್ಲ. ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಿದೆ. ಕೂಡಲೇ ಸರಿಪಡಿಸಬೇಕು ಎಂದು ಒತ್ತಾಯಿಸಿ ಗ್ರಾಮದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆನೇಕಲ್ ವಿದ್ಯುತ್ ಪ್ರಸರಣ ಘಟಕದ ಮುಂದೆ ಪ್ರತಿಭಟನೆ ನಡೆಸಿ ಕಚೇರಿಗೆ ಬೀಗ ಹಾಕಿದರು.</p>.<p>ಮುಖಂಡರಾದ ಬಾಬು, ರಮೇಶ್, ಶಶಿಧರ್ ರೆಡ್ಡಿ, ಧರ್ಮೇಂದ್ರ, ಸಂತೋಷ್, ಪ್ರವೀಣ್, ಸುಚೀಂದ್ರರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>