<p><strong>ದೊಡ್ಡಬಳ್ಳಾಪುರ:</strong> ‘ವಿದ್ಯಾರ್ಥಿಗಳು ದೂರದೃಷ್ಟಿ, ಸತತ ಪ್ರಯತ್ನ, ಗುರುಗಳ ಮಾರ್ಗದರ್ಶನ, ಸಮಯಾವಕಾಶವನ್ನು ಸೂಕ್ತ ರೀತಿಯಲ್ಲಿ ಸದುಪಯೋಗ ಮಾಡಿಕೊಂಡರೆ ಯಶಸ್ಸು ದೊರೆಯಲಿದೆ’ ಎಂದು ದೊಡ್ಡಬಳ್ಳಾಪುರದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಡಿಪೊ ವ್ಯವಸ್ಥಾಪಕ ಎಸ್.ಆರ್. ಸಂತೋಷ್ ಹೇಳಿದರು.</p>.<p>ನಗರ ಹೊರವಲಯದ ಜವಹಾರ್ ನವೋದಯ ವಿದ್ಯಾಲಯದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಜವಾಹರ್ ನವೋದಯ ವಿದ್ಯಾಲಯಗಳು ದೇಶದಲ್ಲಿಯೇ ಅತ್ಯಂತ ಪ್ರತಿಷ್ಠಿತ ಶಾಲೆಗಳು ಎನ್ನುವ ಕೀರ್ತಿಗೆ ಪಾತ್ರವಾಗಿವೆ. ಇಲ್ಲಿ ಕಲಿಯುವ ವಿದ್ಯಾರ್ಥಿಗಳು ಪ್ರತಿಭಾವಂತರಾಗುತ್ತಾರೆ ಎನ್ನುವುದನ್ನು ಇಂದಿಗೂ ಉಳಿಸಿಕೊಂಡು ಬಂದಿವೆ<br />ಎಂದರು.</p>.<p>ಪ್ರಾಂಶುಪಾಲ ಆರ್. ಚಕ್ರವರ್ತಿ ಅಧ್ಯಕ್ಷತೆವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ವಸ್ತು ಪ್ರದರ್ಶನ, ವಿದ್ಯಾರ್ಥಿಗಳಿಂದ ಸಮೂಹ ನೃತ್ಯ, ದೇಶಭಕ್ತಿ ಗೀತೆ ಗಾಯನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong> ‘ವಿದ್ಯಾರ್ಥಿಗಳು ದೂರದೃಷ್ಟಿ, ಸತತ ಪ್ರಯತ್ನ, ಗುರುಗಳ ಮಾರ್ಗದರ್ಶನ, ಸಮಯಾವಕಾಶವನ್ನು ಸೂಕ್ತ ರೀತಿಯಲ್ಲಿ ಸದುಪಯೋಗ ಮಾಡಿಕೊಂಡರೆ ಯಶಸ್ಸು ದೊರೆಯಲಿದೆ’ ಎಂದು ದೊಡ್ಡಬಳ್ಳಾಪುರದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಡಿಪೊ ವ್ಯವಸ್ಥಾಪಕ ಎಸ್.ಆರ್. ಸಂತೋಷ್ ಹೇಳಿದರು.</p>.<p>ನಗರ ಹೊರವಲಯದ ಜವಹಾರ್ ನವೋದಯ ವಿದ್ಯಾಲಯದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಜವಾಹರ್ ನವೋದಯ ವಿದ್ಯಾಲಯಗಳು ದೇಶದಲ್ಲಿಯೇ ಅತ್ಯಂತ ಪ್ರತಿಷ್ಠಿತ ಶಾಲೆಗಳು ಎನ್ನುವ ಕೀರ್ತಿಗೆ ಪಾತ್ರವಾಗಿವೆ. ಇಲ್ಲಿ ಕಲಿಯುವ ವಿದ್ಯಾರ್ಥಿಗಳು ಪ್ರತಿಭಾವಂತರಾಗುತ್ತಾರೆ ಎನ್ನುವುದನ್ನು ಇಂದಿಗೂ ಉಳಿಸಿಕೊಂಡು ಬಂದಿವೆ<br />ಎಂದರು.</p>.<p>ಪ್ರಾಂಶುಪಾಲ ಆರ್. ಚಕ್ರವರ್ತಿ ಅಧ್ಯಕ್ಷತೆವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ವಸ್ತು ಪ್ರದರ್ಶನ, ವಿದ್ಯಾರ್ಥಿಗಳಿಂದ ಸಮೂಹ ನೃತ್ಯ, ದೇಶಭಕ್ತಿ ಗೀತೆ ಗಾಯನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>