<p><strong>ಸೂಲಿಬೆಲೆ (ಹೊಸಕೋಟೆ):</strong> ‘ಸನಾತನ ಹಿಂದೂ ಧರ್ಮವನ್ನು ವಿದೇಶಗಳಲ್ಲೂ ಪಸರಿಸಲು ದೇಶ ಪರ್ಯಟನೆ ಮಾಡಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ಜ್ಞಾನದ ಬೆಳಕು ನೀಡಿದ್ದಾರೆ’ ಎಂದು ಶಿಕ್ಷಣ ತಜ್ಞ ಶರಣಪ್ಪ ಕಂಬಳಿ ಹೇಳಿದರು.</p>.<p>ತಾಲ್ಲೂಕಿನ ಸೂಲಿಬೆಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜಿಲ್ಲಾಡಳಿತ, ಜಿ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಾಡಪ್ರಭು ಕೆಂಪೇಗೌಡ ಯುವಕರ ಸಂಘದಿಂದ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 160ನೇ ಜಯಂತಿ ಹಾಗೂ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಅವರು<br />ಮಾತನಾಡಿದರು.</p>.<p>ವಸತಿ ಶಾಲೆಯ ಪ್ರಾಚಾರ್ಯ ಬಸವರಾಜ್ ಮಾತನಾಡಿ, ಹಿಂದೂ ಧರ್ಮವನ್ನು ಪರಿವರ್ತಿಸಿ ವೇದಾಂತ ಸಿದ್ಧಾಂತವನ್ನು ಪಶ್ಚಿಮಕ್ಕೆ ತಂದ ಮಹಾನ್ ವ್ಯಕ್ತಿಯ ಜಯಂತಿ ಆಚರಣೆ ಮಾಡುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯ. ವಿವೇಕಾನಂದರ ಸ್ಮರಿಸೋಣ; ವಿವೇಕಾನಂದರನ್ನು ಅನುಸರಿಸೋಣ, ವಿವೇಕ ಮತ್ತು ಆನಂದ ಎರಡನ್ನೂ ಒಮ್ಮೆಯೇ ಪಡೆಯೋಣ ಎಂದು ಹೇಳಿದರು.</p>.<p>ಜೇನುಗೂಡು ಟ್ರಸ್ಟ್ ನಿರ್ದೇಶಕ ದೇವಿದಾಸ್ ಸುಬ್ರಾಯ್ ಶೇಠ್ ಮಾತನಾಡಿ, ವಿವೇಕಾನಂದರ ಆಲೋಚನೆಗಳು ನಮ್ಮನ್ನು ರೂಪಿಸುತ್ತವೆ. ನಮ್ಮ ಏಳಿಗೆಗೆ ನಾವೇ ಶಿಲ್ಪಿಗಳಾಗಬೇಕು ಎಂದು<br />ಹೇಳಿದರು.</p>.<p>ನಾಡಪ್ರಭು ಕೆಂಪೇಗೌಡ ಯುವಕರ ಸಂಘದ ಅಧ್ಯಕ್ಷ ಬಿ.ಎಂ. ಸಾಗರ್ ಮಾತನಾಡಿ, ವೀರ ಸನ್ಯಾಸಿಯು ಯುವಕರ ಬಾಳಿನ ಆಶಾಕಿರಣ. ಅವರ ಆದರ್ಶಗಳನ್ನು ಯುವಕರು ಜೀವನದಲ್ಲಿ ಆಳವಡಿಸಿಕೊಂಡು ಸ್ವಾಭಿಮಾನಿಗಳಾಗಿ ಬದುಕಬೇಕು ಎಂದು ಸಲಹೆ ನೀಡಿದರು.</p>.<p>ಜೇನುಗೂಡು ಟ್ರಸ್ಟ್ ಉಪಾಧ್ಯಕ್ಷ ಚೌಡೇಗೌಡ ಮಾತನಾಡಿ, ಯುವಕ ಮತ್ತು ಯುವತಿಯರು ಸ್ವಾಮಿ ವಿವೇಕಾನಂದರ ಭಾವಚಿತ್ರವನ್ನು ಮನೆಗಳಲ್ಲೂ ಇಟ್ಟುಕೊಂಡು ಸ್ಫೂರ್ತಿ ಪಡೆಯಬೇಕು. ಕಠಿಣ ಪರಿಶ್ರಮದಿಂದ ಮಾತ್ರ ಜೀವನ ಸಾಕ್ಷಾತ್ಕಾರವಾಗಲು ಸಾಧ್ಯ. ಶಿಕ್ಷಣದಿಂದ ಮಾತ್ರ ಸಾಧಕರಾಗಬಹುದು ಎಂದು ಕರೆ ನೀಡಿದರು.</p>.<p>ಆಶುಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ, ಬಹುಮಾನ ವಿತರಿಸಲಾಯಿತು. ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಮತದಾರರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.</p>.<p>ಮಾನವ ಹಕ್ಕುಗಳ ಜಾಗೃತಿ ಸಮಿತಿ ಅಧ್ಯಕ್ಷ ಎಂ.ಆರ್. ಉಮೇಶ್, ಕನ್ನಡ ಸಾಹಿತ್ಯ ಪರಿಷತ್ ಕೋಶಾಧ್ಯಕ್ಷ ಸ್ಟುಡಿಯೊ ಆನಂದ್, ಕಸಾಪ ಹೋಬಳಿ ಘಟಕದ ಅಧ್ಯಕ್ಷ ಪ್ರೇಮಕುಮಾರ್, ನಿರ್ದೇಶಕ ಸೈಯದ್ ಮಹಬೂಬ್, ಶಿಕ್ಷಕರಾದ ಸಂತೋಷ್, ರುತ್ ಜೆಸ್ಸೆಂತಾ, ಲಕ್ಷ್ಮೀ, ಕಾಶಿಪತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂಲಿಬೆಲೆ (ಹೊಸಕೋಟೆ):</strong> ‘ಸನಾತನ ಹಿಂದೂ ಧರ್ಮವನ್ನು ವಿದೇಶಗಳಲ್ಲೂ ಪಸರಿಸಲು ದೇಶ ಪರ್ಯಟನೆ ಮಾಡಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ಜ್ಞಾನದ ಬೆಳಕು ನೀಡಿದ್ದಾರೆ’ ಎಂದು ಶಿಕ್ಷಣ ತಜ್ಞ ಶರಣಪ್ಪ ಕಂಬಳಿ ಹೇಳಿದರು.</p>.<p>ತಾಲ್ಲೂಕಿನ ಸೂಲಿಬೆಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜಿಲ್ಲಾಡಳಿತ, ಜಿ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಾಡಪ್ರಭು ಕೆಂಪೇಗೌಡ ಯುವಕರ ಸಂಘದಿಂದ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 160ನೇ ಜಯಂತಿ ಹಾಗೂ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಅವರು<br />ಮಾತನಾಡಿದರು.</p>.<p>ವಸತಿ ಶಾಲೆಯ ಪ್ರಾಚಾರ್ಯ ಬಸವರಾಜ್ ಮಾತನಾಡಿ, ಹಿಂದೂ ಧರ್ಮವನ್ನು ಪರಿವರ್ತಿಸಿ ವೇದಾಂತ ಸಿದ್ಧಾಂತವನ್ನು ಪಶ್ಚಿಮಕ್ಕೆ ತಂದ ಮಹಾನ್ ವ್ಯಕ್ತಿಯ ಜಯಂತಿ ಆಚರಣೆ ಮಾಡುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯ. ವಿವೇಕಾನಂದರ ಸ್ಮರಿಸೋಣ; ವಿವೇಕಾನಂದರನ್ನು ಅನುಸರಿಸೋಣ, ವಿವೇಕ ಮತ್ತು ಆನಂದ ಎರಡನ್ನೂ ಒಮ್ಮೆಯೇ ಪಡೆಯೋಣ ಎಂದು ಹೇಳಿದರು.</p>.<p>ಜೇನುಗೂಡು ಟ್ರಸ್ಟ್ ನಿರ್ದೇಶಕ ದೇವಿದಾಸ್ ಸುಬ್ರಾಯ್ ಶೇಠ್ ಮಾತನಾಡಿ, ವಿವೇಕಾನಂದರ ಆಲೋಚನೆಗಳು ನಮ್ಮನ್ನು ರೂಪಿಸುತ್ತವೆ. ನಮ್ಮ ಏಳಿಗೆಗೆ ನಾವೇ ಶಿಲ್ಪಿಗಳಾಗಬೇಕು ಎಂದು<br />ಹೇಳಿದರು.</p>.<p>ನಾಡಪ್ರಭು ಕೆಂಪೇಗೌಡ ಯುವಕರ ಸಂಘದ ಅಧ್ಯಕ್ಷ ಬಿ.ಎಂ. ಸಾಗರ್ ಮಾತನಾಡಿ, ವೀರ ಸನ್ಯಾಸಿಯು ಯುವಕರ ಬಾಳಿನ ಆಶಾಕಿರಣ. ಅವರ ಆದರ್ಶಗಳನ್ನು ಯುವಕರು ಜೀವನದಲ್ಲಿ ಆಳವಡಿಸಿಕೊಂಡು ಸ್ವಾಭಿಮಾನಿಗಳಾಗಿ ಬದುಕಬೇಕು ಎಂದು ಸಲಹೆ ನೀಡಿದರು.</p>.<p>ಜೇನುಗೂಡು ಟ್ರಸ್ಟ್ ಉಪಾಧ್ಯಕ್ಷ ಚೌಡೇಗೌಡ ಮಾತನಾಡಿ, ಯುವಕ ಮತ್ತು ಯುವತಿಯರು ಸ್ವಾಮಿ ವಿವೇಕಾನಂದರ ಭಾವಚಿತ್ರವನ್ನು ಮನೆಗಳಲ್ಲೂ ಇಟ್ಟುಕೊಂಡು ಸ್ಫೂರ್ತಿ ಪಡೆಯಬೇಕು. ಕಠಿಣ ಪರಿಶ್ರಮದಿಂದ ಮಾತ್ರ ಜೀವನ ಸಾಕ್ಷಾತ್ಕಾರವಾಗಲು ಸಾಧ್ಯ. ಶಿಕ್ಷಣದಿಂದ ಮಾತ್ರ ಸಾಧಕರಾಗಬಹುದು ಎಂದು ಕರೆ ನೀಡಿದರು.</p>.<p>ಆಶುಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ, ಬಹುಮಾನ ವಿತರಿಸಲಾಯಿತು. ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಮತದಾರರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.</p>.<p>ಮಾನವ ಹಕ್ಕುಗಳ ಜಾಗೃತಿ ಸಮಿತಿ ಅಧ್ಯಕ್ಷ ಎಂ.ಆರ್. ಉಮೇಶ್, ಕನ್ನಡ ಸಾಹಿತ್ಯ ಪರಿಷತ್ ಕೋಶಾಧ್ಯಕ್ಷ ಸ್ಟುಡಿಯೊ ಆನಂದ್, ಕಸಾಪ ಹೋಬಳಿ ಘಟಕದ ಅಧ್ಯಕ್ಷ ಪ್ರೇಮಕುಮಾರ್, ನಿರ್ದೇಶಕ ಸೈಯದ್ ಮಹಬೂಬ್, ಶಿಕ್ಷಕರಾದ ಸಂತೋಷ್, ರುತ್ ಜೆಸ್ಸೆಂತಾ, ಲಕ್ಷ್ಮೀ, ಕಾಶಿಪತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>