‘ಪ್ರಜಾಪ್ರಭುತ್ವವದಲ್ಲಿ ಮತದಾನ ಹಕ್ಕು ಸರ್ವ ಶ್ರೇಷ್ಠವಾದ ಹಕ್ಕು ಅಂತಹ ಮತದಾನದ ಹಕ್ಕುನ್ನು ಕಿತ್ತುಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸ್ಥಳೀಯ ಬಿಎಲ್ಓಗಳು, ರಾಜಸ್ವ ನಿರೀಕ್ಷಕರು ಮತ್ತು ಚುನಾವಣಾ ತಂಡ ಪ್ರತಿ ಮನೆಗಳಿಗೂ ಭೇಟಿ ನೀಡಿ ಮತದಾರರ ಬಗ್ಗೆ ಮಾಹಿತಿ ಪಡೆದು ಮತದಾರರ ನೋಂದಣಿ ಪ್ರಕ್ರಿಯೆಯನ್ನು ನಡೆಸಬೇಕು. ಆದರೆ ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧೆಡೆಯ ವ್ಯಕ್ತಿಗಳನ್ನು ಆನೇಕಲ್ ಮತದಾರ ಪಟ್ಟಿಯಲ್ಲಿ ಸೇರಿಸಲಾಗಿದೆ. ಈ ಬಗ್ಗೆ ತಹಶೀಲ್ದಾರ್ ಅವರಿಗೆ ತಿಳಿಸಲಾಗಿದೆ. ಶೀಘ್ರ ಕ್ರಮಕೈಗೊಂಡು ಅರ್ಹರನ್ನು ಮಾತ್ರ ಮತದಾರ ಪಟ್ಟಿಗೆ ಸೇರಿಸಬೇಕು’ ಎಂದರು