<p><strong>ವಿಜಯಪುರ (ದೇವನಹಳ್ಳಿ): </strong>ಇಲ್ಲಿನ ಪುರಸಭೆಗೆ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಸಭೆಗೆ ಬುಧವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರಿಗೆ ಪುರಸಭೆಯ ಹಲವು ಸದಸ್ಯರು ಸಮಸ್ಯೆಯ ಸುರಿಮಳೆ ಸುರಿಸಿದರು.</p>.<p>ಪಟ್ಟಣದ ಪುರಸಭೆಗೆ 100 ವರ್ಷ ತುಂಬಿದರೂ ಸುಸಜ್ಜಿತ ಕಟ್ಟಡ ಇಲ್ಲದೆ ಹಲವು ಸಮಸ್ಯೆ ಎದುರಿಸುವಂತಾಗಿದೆ. ನೂತನ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಹಲವು ಸದಸ್ಯರು ಮನವಿ ಮಾಡಿದರು.</p>.<p>ಪುರಸಭೆಗೆ 105 ವರ್ಷಗಳ ಇತಿಹಾಸವಿದೆ. ಇಂತಹ ಪುರಾತನ ಪುರಸಭೆಗೆ ಹೊಸ ಕಟ್ಟಡವನ್ನು ನಿರ್ಮಾಣ ಮಾಡಬೇಕಿದೆ. ಪುರಸಭೆಯಲ್ಲಿ ಕೆಲಸ ಮಾಡಲು ನೌಕರರ ಕೊರತೆ ಇದೆ. ನೌಕರರನ್ನು ನೇಮಕ ಮಾಡುವಂತೆ ವಿ.ನಂದಕುಮಾರ್ ಮನವಿ ಮಾಡಿದರು.</p>.<p>ಪಟ್ಟಣದಲ್ಲಿ ಒಳಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲ. ಎಲ್ಲೆಂದರಲ್ಲಿ ಮ್ಯಾನ್ಹೋಲ್ ಗಳ ಮೂಲಕ ಕೊಳಚೆ ನೀರು ಹರಿಯುತ್ತಿರುತ್ತವೆ. ಇದರಿಂದ ಸಾರ್ವಜನಿಕರಿಂದ ನಾವು ತೀವ್ರ ಆಕ್ರೋಶಕ್ಕೆ ಗುರಿಯಾಗುತ್ತಿದ್ದೇವೆ. ಈ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಬೇಕೆಂದು ಹೇಳಿದರು.</p>.<p>ಪಟ್ಟಣದಲ್ಲಿ ಪುರಸಭೆಗೆ ಸೇರಿದ ಬಹಳಷ್ಟು ಆಸ್ತಿಗಳನ್ನು ಕೆಲ ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಅವುಗಳನ್ನು ಸ್ವಾಧೀನಕ್ಕೆ ಪಡೆದುಕೊಂಡು ತಡೆಗೋಡೆ ನಿರ್ಮಿಸಿ ಪುರಸಭೆ ಆಸ್ತಿಯನ್ನು ಉಳಿಸಬೇಕೆಂದು ಪುರಸಭೆ ಸದಸ್ಯ ಸಿ.ಎಂ.ರಾಮು ತಿಳಿಸಿದರು.</p>.<p>ಚಿಕ್ಕಬಳ್ಳಾಪುರ ರಸ್ತೆಯಲ್ಲಿ ಪುರಸಭೆಗೆ ಸೇರಿರುವ ಜಾಗದಲ್ಲಿ, ಅನಧಿಕೃತವಾಗಿ ಕಡಪ ಕಲ್ಲುಗಳನ್ನು ಇಟ್ಟುಕೊಂಡಿದ್ದಾರೆ. ಅದನ್ನು ತೆರವುಗೊಳಿಸಿ, ಪುರಸಭೆಗೆ ಆದಾಯ ಬರುವಂತೆ ಮಾಡಿಕೊಳ್ಳಬೇಕು ಎಂದು ಸದಸ್ಯ ಬೈರೇಗೌಡ ಹೇಳಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಪೊಲೀಸ್ ಬಂದೋಬಸ್ತ್ ನಲ್ಲಿ ಪುರಸಭೆಯ ಒತ್ತುವರಿ ಜಾಗಗಳನ್ನು ಸ್ವಾಧೀನಕ್ಕೆ ಪಡೆದುಕೊಂಡು ಕಾಂಪೌಂಡ್ ನಿರ್ಮಿಸಿ, ನಾಮಫಲಕ ಅಳವಡಿಸಲಾಗುವುದು. ಚಿಕ್ಕಬಳ್ಳಾಪುರ ರಸ್ತೆಯಲ್ಲಿ ಪುರಸಭೆ ಜಾಗದಲ್ಲಿರುವ ಕಡಪ ಕಲ್ಲುಗಳನ್ನು ಕೂಡಲೇ ತೆರವುಗೊಳಿಸುವಂತೆ ಮುಖ್ಯಾಧಿಕಾರಿ ಸತ್ಯನಾರಾಯಣ್ಗೆ ಸೂಚಿಸಿದರು.</p>.<p>ಪುರಸಭೆ ಅಗತ್ಯವಿರುವ ನೌಕರರನ್ನು ದೇವನಹಳ್ಳಿಯಿಂದ ನಿಯೋಜಿಸಲಾಗುವುದು. ಮುಂದಿನ ದಿನಗಳಲ್ಲಿ ಕಾಯಂ ನೌಕರರ ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಪುರಸಭೆಯ ಅಧಿಕಾರಿಗಳಿಗೆ ಸಾಥ್ ನೀಡಬೇಕು. ತೆರಿಗೆ ಸಂಗ್ರಹಕ್ಕೆ ಆದ್ಯತೆ ನೀಡಿ, ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಮತದಾರರ ಪಟ್ಟಿ ಪರಿಷ್ಕರಣೆಯ ವೇಳೆ ಮತಗಟ್ಟೆಯ ಅಧಿಕಾರಿಗಳು, ಸಿಬ್ಬಂದಿ ತುಂಬಾ ಜಾಗ್ರತೆಯಿಂದ ಕೆಲಸ ಮಾಡಬೇಕು, ಸೇರ್ಪಡೆ, ತೆಗೆಯುವಂತಹವುಗಳನ್ನು ಎಚ್ಚರಿಕೆಯಿಂದ ಮಾಡಬೇಕು. ಹೊಸ ಸೇರ್ಪಡೆಗಳಿಗೆ ಸೂಕ್ತ ದಾಖಲೆಗಳನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್, ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ದೇವನಹಳ್ಳಿ): </strong>ಇಲ್ಲಿನ ಪುರಸಭೆಗೆ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಸಭೆಗೆ ಬುಧವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರಿಗೆ ಪುರಸಭೆಯ ಹಲವು ಸದಸ್ಯರು ಸಮಸ್ಯೆಯ ಸುರಿಮಳೆ ಸುರಿಸಿದರು.</p>.<p>ಪಟ್ಟಣದ ಪುರಸಭೆಗೆ 100 ವರ್ಷ ತುಂಬಿದರೂ ಸುಸಜ್ಜಿತ ಕಟ್ಟಡ ಇಲ್ಲದೆ ಹಲವು ಸಮಸ್ಯೆ ಎದುರಿಸುವಂತಾಗಿದೆ. ನೂತನ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಹಲವು ಸದಸ್ಯರು ಮನವಿ ಮಾಡಿದರು.</p>.<p>ಪುರಸಭೆಗೆ 105 ವರ್ಷಗಳ ಇತಿಹಾಸವಿದೆ. ಇಂತಹ ಪುರಾತನ ಪುರಸಭೆಗೆ ಹೊಸ ಕಟ್ಟಡವನ್ನು ನಿರ್ಮಾಣ ಮಾಡಬೇಕಿದೆ. ಪುರಸಭೆಯಲ್ಲಿ ಕೆಲಸ ಮಾಡಲು ನೌಕರರ ಕೊರತೆ ಇದೆ. ನೌಕರರನ್ನು ನೇಮಕ ಮಾಡುವಂತೆ ವಿ.ನಂದಕುಮಾರ್ ಮನವಿ ಮಾಡಿದರು.</p>.<p>ಪಟ್ಟಣದಲ್ಲಿ ಒಳಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲ. ಎಲ್ಲೆಂದರಲ್ಲಿ ಮ್ಯಾನ್ಹೋಲ್ ಗಳ ಮೂಲಕ ಕೊಳಚೆ ನೀರು ಹರಿಯುತ್ತಿರುತ್ತವೆ. ಇದರಿಂದ ಸಾರ್ವಜನಿಕರಿಂದ ನಾವು ತೀವ್ರ ಆಕ್ರೋಶಕ್ಕೆ ಗುರಿಯಾಗುತ್ತಿದ್ದೇವೆ. ಈ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಬೇಕೆಂದು ಹೇಳಿದರು.</p>.<p>ಪಟ್ಟಣದಲ್ಲಿ ಪುರಸಭೆಗೆ ಸೇರಿದ ಬಹಳಷ್ಟು ಆಸ್ತಿಗಳನ್ನು ಕೆಲ ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಅವುಗಳನ್ನು ಸ್ವಾಧೀನಕ್ಕೆ ಪಡೆದುಕೊಂಡು ತಡೆಗೋಡೆ ನಿರ್ಮಿಸಿ ಪುರಸಭೆ ಆಸ್ತಿಯನ್ನು ಉಳಿಸಬೇಕೆಂದು ಪುರಸಭೆ ಸದಸ್ಯ ಸಿ.ಎಂ.ರಾಮು ತಿಳಿಸಿದರು.</p>.<p>ಚಿಕ್ಕಬಳ್ಳಾಪುರ ರಸ್ತೆಯಲ್ಲಿ ಪುರಸಭೆಗೆ ಸೇರಿರುವ ಜಾಗದಲ್ಲಿ, ಅನಧಿಕೃತವಾಗಿ ಕಡಪ ಕಲ್ಲುಗಳನ್ನು ಇಟ್ಟುಕೊಂಡಿದ್ದಾರೆ. ಅದನ್ನು ತೆರವುಗೊಳಿಸಿ, ಪುರಸಭೆಗೆ ಆದಾಯ ಬರುವಂತೆ ಮಾಡಿಕೊಳ್ಳಬೇಕು ಎಂದು ಸದಸ್ಯ ಬೈರೇಗೌಡ ಹೇಳಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಪೊಲೀಸ್ ಬಂದೋಬಸ್ತ್ ನಲ್ಲಿ ಪುರಸಭೆಯ ಒತ್ತುವರಿ ಜಾಗಗಳನ್ನು ಸ್ವಾಧೀನಕ್ಕೆ ಪಡೆದುಕೊಂಡು ಕಾಂಪೌಂಡ್ ನಿರ್ಮಿಸಿ, ನಾಮಫಲಕ ಅಳವಡಿಸಲಾಗುವುದು. ಚಿಕ್ಕಬಳ್ಳಾಪುರ ರಸ್ತೆಯಲ್ಲಿ ಪುರಸಭೆ ಜಾಗದಲ್ಲಿರುವ ಕಡಪ ಕಲ್ಲುಗಳನ್ನು ಕೂಡಲೇ ತೆರವುಗೊಳಿಸುವಂತೆ ಮುಖ್ಯಾಧಿಕಾರಿ ಸತ್ಯನಾರಾಯಣ್ಗೆ ಸೂಚಿಸಿದರು.</p>.<p>ಪುರಸಭೆ ಅಗತ್ಯವಿರುವ ನೌಕರರನ್ನು ದೇವನಹಳ್ಳಿಯಿಂದ ನಿಯೋಜಿಸಲಾಗುವುದು. ಮುಂದಿನ ದಿನಗಳಲ್ಲಿ ಕಾಯಂ ನೌಕರರ ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಪುರಸಭೆಯ ಅಧಿಕಾರಿಗಳಿಗೆ ಸಾಥ್ ನೀಡಬೇಕು. ತೆರಿಗೆ ಸಂಗ್ರಹಕ್ಕೆ ಆದ್ಯತೆ ನೀಡಿ, ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಮತದಾರರ ಪಟ್ಟಿ ಪರಿಷ್ಕರಣೆಯ ವೇಳೆ ಮತಗಟ್ಟೆಯ ಅಧಿಕಾರಿಗಳು, ಸಿಬ್ಬಂದಿ ತುಂಬಾ ಜಾಗ್ರತೆಯಿಂದ ಕೆಲಸ ಮಾಡಬೇಕು, ಸೇರ್ಪಡೆ, ತೆಗೆಯುವಂತಹವುಗಳನ್ನು ಎಚ್ಚರಿಕೆಯಿಂದ ಮಾಡಬೇಕು. ಹೊಸ ಸೇರ್ಪಡೆಗಳಿಗೆ ಸೂಕ್ತ ದಾಖಲೆಗಳನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್, ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>