ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶ್ರೀನಾಥ್ ಗೌಡ ಮಾತನಾಡಿ, ಪಂಚಾಯಿತಿ ಚುನಾವಣೆಯಲ್ಲಿ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗಬಾರದು. ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಎಲ್ಲಾ ಮತದಾರರು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಈ ಕುರಿತು ಜಾಗೃತಿ ಅಭಿಯಾನದ ಮೂಲಕ ಮತದಾರರಿಗೆ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.